ಇಂಫಾಲ: ಇಂದು ಮಣಿಪುರ ರಾಜ್ಯೋತ್ಸವ. ಈ ಸಂದರ್ಭದಲ್ಲಿ ರಾಜ್ಯದ ಘನತೆಯನ್ನು ಎತ್ತಿ ಹಿಡಿಯುವಂತೆ ಮುಖ್ಯಮಂತ್ರಿ ಎನ್.ಬಿರೇನ್ ಸಿಂಗ್ ಅವರು ಜನರಲ್ಲಿ ಮನವಿ ಮಾಡಿದ್ದಾರೆ.
'1972ರ ಜನವರಿ 21 ರಂದು ಮಣಿಪುರ ರಾಜ್ಯ ರಚನೆಯಾಯಿತು. ಇದು ನಮ್ಮ ಇತಿಹಾಸದಲ್ಲಿ ಮಹತ್ವದ ಮೈಲಿಗಲ್ಲು.
ಪ್ರಧಾನಿಗೆ ಧನ್ಯವಾದ ಹೇಳಿದ ಸಿಎಂ
ಮಣಿಪುರ ರಾಜ್ಯೋತ್ಸವ ದಿನದಂದು ಶುಭ ಹಾರೈಸಿದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬಿರೇನ್ ಸಿಂಗ್ ಧನ್ಯವಾದ ಹೇಳಿದ್ದಾರೆ. 'ರಾಜ್ಯೋತ್ಸವ ದಿನದಂದು ಪ್ರಧಾನಿ ಮೋದಿ ಅವರಿಗೆ ಮಣಿಪುರದ ಜನತೆಯ ಪರವಾಗಿ ನನ್ನ ಹೃತ್ಪೂರ್ವಕ ಕೃತಜ್ಞತೆಗಳನ್ನು ಸಲ್ಲಿಸುತ್ತೇನೆ. ನಿಮ್ಮ ಮಾತುಗಳು ಮಣಿಪುರದ ಉಜ್ವಲ ಭವಿಷ್ಯಕ್ಕಾಗಿ ಶ್ರಮಿಸಲು ನಮಗೆ ಸ್ಫೂರ್ತಿ ನೀಡುತ್ತವೆ. ನಿಮ್ಮ ಪ್ರೋತ್ಸಾಹ ಮತ್ತು ಬೆಂಬಲಕ್ಕಾಗಿ ಧನ್ಯವಾದಗಳು' ಎಂದು ಸಿಎಂ ಹೇಳಿದ್ದಾರೆ.