HEALTH TIPS

ಹಾವು ಕಚ್ಚಿದವರಿಗೆ ಚಿಕಿತ್ಸೆ: ರಾಜ್ಯಗಳೊಂದಿಗೆ ಮಾತುಕತೆ ನಡೆಸಿ-ಸುಪ್ರೀಂ ಕೋರ್ಟ್‌

ನವದೆಹಲಿ: ಹಾವು ಕಚ್ಚಿ ಜನರಿಗೆ ತೊಂದರೆ ಎದುರಾಗುವ ಸಮಸ್ಯೆಯು ದೇಶದ ಎಲ್ಲೆಡೆ ಇದೆ, ವೈದ್ಯಕೀಯ ಕೇಂದ್ರಗಳಲ್ಲಿ ಇದಕ್ಕೆ ಅಗತ್ಯ ಔಷಧಗಳು ಲಭ್ಯವಿರುವಂತೆ ಮಾಡಲು ಕೇಂದ್ರ ಸರ್ಕಾರವು ಎಲ್ಲ ರಾಜ್ಯಗಳ ಅಭಿಪ್ರಾಯ ಆಲಿಸಬೇಕು ಎಂದು ಸುಪ್ರೀಂ ಕೋರ್ಟ್‌ ಸೋಮವಾರ ಹೇಳಿದೆ.

ಹಾವು ಕಚ್ಚಿದವರಿಗೆ ಚಿಕಿತ್ಸೆ ನೀಡಲು ಅಗತ್ಯವಿರುವ ಔಷಧದ ಕೊರತೆಯ ಕಾರಣದಿಂದಾಗಿ ದೇಶದಲ್ಲಿ ಸಾರ್ವಜನಿಕ ಆರೋಗ್ಯದ ಬಿಕ್ಕಟ್ಟು ಸೃಷ್ಟಿಯಾಗಿದೆ ಎಂಬ ದೂರು ಇರುವ ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿಗಳಾದ ಬಿ.ಆರ್. ಗವಾಯಿ ಮತ್ತು ಎಸ್.ವಿ.ಎನ್. ಭಟ್ಟಿ ಅವರು ಇರುವ ವಿಭಾಗೀಯ ಪೀಠವು ನಡೆಸಿತು.

'ಎಲ್ಲ ರಾಜ್ಯಗಳ ಪ್ರತಿನಿಧಿಗಳ ನೀವು (ಕೇಂದ್ರ ಸರ್ಕಾರ) ಸಭೆ ನಡೆಸಬಹುದು' ಎಂದು ಪೀಠವು ಹೇಳಿತು.

ಅರ್ಜಿಯಲ್ಲಿ ಪ್ರಸ್ತಾಪಿಸಿರುವ ವಿಷಯಕ್ಕೆ ಸಂಬಂಧಿಸಿದಂತೆ ಪ್ರಮಾಣಪತ್ರವನ್ನು ಸಲ್ಲಿಸುವುದಾಗಿ ಕೆಲವು ರಾಜ್ಯಗಳು ತಿಳಿಸಿದವು. ಅವುಗಳಿಗೆ ಆರು ವಾರಗಳ ಸಮಯ ನೀಡಿದ ಪೀಠವು, ವಿಚಾರಣೆ ಮುಂದೂಡಿತು.

ಹಾವು ಕಚ್ಚಿದವರಿಗೆ ಚಿಕಿತ್ಸೆ ನೀಡಲು ಅಗತ್ಯವಿರುವ ಔಷಧಗಳು ಎಲ್ಲ ಆರೋಗ್ಯ ಕೇಂದ್ರಗಳಲ್ಲಿ, ಸರ್ಕಾರಿ ಆಸ್ಪತ್ರೆಗಳಲ್ಲಿ, ವೈದ್ಯಕೀಯ ಕಾಲೇಜುಗಳಲ್ಲಿ ಲಭ್ಯವಿರುವಂತೆ ಮಾಡಬೇಕು ಎಂಬ ಕೋರಿಕೆ ಇರುವ ಅರ್ಜಿಯನ್ನು ವಕೀಲ ಶೈಲೇಂದ್ರ ಮಣಿ ತ್ರಿಪಾಠಿ ಅವರು ಸಲ್ಲಿಸಿದ್ದಾರೆ.

ಭಾರತದಲ್ಲಿ ಪ್ರತಿ ವರ್ಷ ಹಾವು ಕಚ್ಚಿ ಮೃತಪಡುವವರ ಸಂಖ್ಯೆಯು 58 ಸಾವಿರದಷ್ಟಿದೆ. ಹೀಗಿದ್ದರೂ ಇದಕ್ಕೆ ಚಿಕಿತ್ಸೆ ನೀಡಲು ಅಗತ್ಯವಿರುವ ಔಷಧಗಳ ಕೊರತೆ ಇದೆ ಎಂದು ಅರ್ಜಿಯಲ್ಲಿ ಹೇಳಲಾಗಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries