HEALTH TIPS

ಕಾಡು ಪ್ರಾಣಿಗಳ ವಲಸೆ: ಕಾಡಿನಲ್ಲಿ ನೀರು ಮತ್ತು ಆಹಾರದ ಲಭ್ಯತೆಯನ್ನು ಖಚಿತಪಡಿಸಿಕೊಳ್ಳಲು FFW ಮಿಷನ್.

Top Post Ad

Click to join Samarasasudhi Official Whatsapp Group

Qries

ತಿರುವನಂತಪುರಂ: ಮಾನವ-ವನ್ಯಜೀವಿ ಸಂಘರ್ಷವನ್ನು ತಗ್ಗಿಸುವ ಭಾಗವಾಗಿ ಕಾಡು ಪ್ರಾಣಿಗಳು ಜನವಸತಿ ಪ್ರದೇಶಗಳಿಗೆ ಪ್ರವೇಶಿಸುವುದನ್ನು ತಡೆಯಲು ಅರಣ್ಯ ಇಲಾಖೆ ಜಾರಿಗೆ ತಂದಿರುವ ಮಿಷನ್ ಎಫ್‍ಎಫ್‍ಡಬ್ಲ್ಯೂ (ಮಿಷನ್ ಆಹಾರ, ಮೇವು, ನೀರು) ಅನ್ನು ಕಾಲಮಿತಿಯೊಳಗೆ ಪೂರ್ಣಗೊಳಿಸಲಾಗುವುದು ಎಂದು ಅರಣ್ಯ ಸಚಿವ ಎ.ಕೆ. ಶಶೀಂದ್ರನ್ ಮಾಹಿತಿ ನೀಡಿದ್ದಾರೆ.  ವಯನಾಡ್ ವನ್ಯಜೀವಿ ದಾಳಿಯ ಕುರಿತು ನಡೆದ ಉನ್ನತ ಮಟ್ಟದ ಪರಿಶೀಲನಾ ಸಭೆಯ ನಂತರ ಸಚಿವರು ಮಾತನಾಡುತ್ತಿದ್ದರು.

ಮಾನವ-ವನ್ಯಜೀವಿ ಸಂಘರ್ಷ ಹೆಚ್ಚಾಗಿ ಕಂಡುಬರುವ ಜನವರಿ-ಮೇ ತಿಂಗಳುಗಳಲ್ಲಿ ಅರಣ್ಯದೊಳಗೆ ನೀರು ಮತ್ತು ಆಹಾರ ಲಭ್ಯತೆಯನ್ನು ಖಚಿತಪಡಿಸಿಕೊಳ್ಳಲು ಈ ಮಿಷನ್ ಅನ್ನು ವಿಶೇಷ ಯಜ್ಞವಾಗಿ ಜಾರಿಗೊಳಿಸಲಾಗುತ್ತಿದೆ.

ಪ್ರಸ್ತುತ, ವನ್ಯಜೀವಿ ಸಂಘರ್ಷಕ್ಕೆ ಅವಕಾಶವಿರುವ 63 ತಾಣಗಳನ್ನು ಗುರುತಿಸಲಾಗಿದೆ. ಡ್ರೋನ್‍ಗಳನ್ನು ಬಳಸುವುದು ಸೇರಿದಂತೆ ತಪಾಸಣೆಗಳು ಇಲ್ಲಿ ಮುಂದುವರಿಯುತ್ತವೆ. ಇದರೊಂದಿಗೆ, ಕೇರಳದೊಂದಿಗೆ ಗಡಿಯನ್ನು ಹಂಚಿಕೊಳ್ಳುವ ರಾಜ್ಯಗಳ ಅರಣ್ಯ ಸಚಿವರೊಂದಿಗೆ ಚರ್ಚಿಸಲು ಅಂತರರಾಜ್ಯ ಸಚಿವರ ಮಂಡಳಿಯನ್ನು ಕರೆಯಲು ಸಹ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ. ಪ್ರದೇಶಗಳಲ್ಲಿ ಕ್ಯಾಮೆರಾ ಮೇಲ್ವಿಚಾರಣಾ ವ್ಯವಸ್ಥೆಯನ್ನು ಹೆಚ್ಚಿಸಲಾಗಿದೆ. ಕಾಡಿನೊಳಗೆ ನಡೆಯುವ ಘಟನೆಗಳನ್ನು ಮೇಲ್ವಿಚಾರಣೆ ಮಾಡಲು ನೈಜ-ಸಮಯದ ಮೇಲ್ವಿಚಾರಣಾ ವ್ಯವಸ್ಥೆಯನ್ನು ಸ್ಥಾಪಿಸಲಾಗುವುದು. ಪ್ರಾಥಮಿಕ ಪ್ರತಿಕ್ರಿಯೆ ತಂಡ ಕೂಡ ತಕ್ಷಣ ಕ್ರಮ ಕೈಗೊಳ್ಲಲಿದೆ. ಈ ಪ್ರದೇಶದಲ್ಲಿ ಕ್ಯಾಮೆರಾಗಳನ್ನು ಅಳವಡಿಸಲು ವಿಪತ್ತು ನಿರ್ವಹಣಾ ಪ್ರಾಧಿಕಾರವು 50 ಲಕ್ಷ ರೂ.ಗಳನ್ನು ಮಂಜೂರು ಮಾಡಿದೆ ಎಂದು ಸಚಿವರು ಹೇಳಿರುವರು.



Below Post Ad

src="https://blogger.googleusercontent.com/img/b/R29vZ2xl/AVvXsEik3hLMvgO1WDICUKu_VF5lQRG3CMZau_AmC5MorS73B9lRYpLdDKJGTnB8c-U47BHqrAJ7dkiQUqiUWGQ6qg9A5jtCXrPkzIP4GPJfI00HmwhHX-3VG35FjkD_MxxI10r2v4FqSQ8LuyjG/w640-h360/samarasa+new+add.JPG" width="500px" / />



ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.
Qries