HEALTH TIPS

ಕೇರಳ: ತಾಪಮಾನ ಏರಿಕೆ: ಕಾರ್ಮಿಕರ ಕೆಲಸದ ಅವಧಿಯಲ್ಲಿ ಬದಲಾವಣೆ

ತಿರುವನಂತಪುರ: ಕೇರಳದಲ್ಲಿ ಹಗಲಿನ ವೇಳೆ ತಾಪಮಾನ ಏರಿಕೆಯಾಗುತ್ತಿರುವ ಕಾರಣ ಕಾರ್ಮಿಕರ ಕೆಲಸ ಅವಧಿಯಲ್ಲಿ ಬದಲಾವಣೆ ಮಾಡಲಾಗಿದೆ.

ಬೆಳಿಗ್ಗೆ 7 ರಿಂದ ಸಂಜೆ 7 ಗಂಟೆಯವರೆಗೆ ದುಡಿಯುವ ಎಲ್ಲಾ ಕಾರ್ಮಿಕರು ಮಧ್ಯಾಹ್ನ 12ರಿಂದ 3 ಗಂಟೆಯವರೆಗೆ ಕಡ್ಡಾಯವಾಗಿ ವಿಶ್ರಾಂತಿ ತೆಗೆದುಕೊಳ್ಳಬೇಕು ಎಂದು ಲೇಬರ್‌ ಕಮಿಷನರ್‌ ಸಫ್ನಾ ನಾಸಿರುದ್ದೀನ್‌ ಅವರು ಅಧಿಕೃತ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪಾಳಿಯಲ್ಲಿ ಕೆಲಸ ಮಾಡುವವರಿಗೆ ಬೆಳಿಗ್ಗೆ ಆರಂಭವಾದ ಕೆಲಸ 12 ಗಂಟೆಗೆ ಕೊನೆಗೊಳ್ಳಬೇಕು. ಮಧ್ಯಾಹ್ನದ ಪಾಳಿ 3 ಗಂಟೆಗೆ ಆರಂಭವಾಗಬೇಕು. ಮುಖ್ಯವಾಗಿ ಕಟ್ಟಡ, ರಸ್ತೆ ನಿರ್ಮಾಣ ಕೆಲಸ ಮಾಡುವವರು ಈ ನಿಯಮ ಪಾಲಿಸಲೇಬೇಕು. ಕಾರ್ಮಿಕರ ಕೆಲಸದ ಅವಧಿಯ ಬಗ್ಗೆ ಪರಿಶೀಲನೆ ನಡೆಸಲು ಅಧಿಕಾರಿಯೊಬ್ಬರನ್ನು ನೇಮಿಸಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸನ್‌ಸ್ಟ್ರೋಕ್‌ನಂತಹ ಅಪಾಯ ತಪ್ಪಿಸಲು ಮೇ 10ರವರೆಗೆ ಈ ನಿಯಮ ಜಾರಿಯಲ್ಲಿರಲಿದೆ. ಸಮುದ್ರ ಮಟ್ಟದಿಂದ 3 ಸಾವಿರ ಅಡಿ ಎತ್ತರದಲ್ಲಿ ವಾಸವಿರುವ ಬಿಸಿಲಿನ ಝಳದಿಂದ ಅಪಾಯ ಎದುರಾಗದಿರುವ ಪ್ರದೇಶದಲ್ಲಿರುವವರಿಗೆ ಈ ನಿಯಮ ಅನ್ವಯವಾಗದು ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

src="https://blogger.googleusercontent.com/img/b/R29vZ2xl/AVvXsEik3hLMvgO1WDICUKu_VF5lQRG3CMZau_AmC5MorS73B9lRYpLdDKJGTnB8c-U47BHqrAJ7dkiQUqiUWGQ6qg9A5jtCXrPkzIP4GPJfI00HmwhHX-3VG35FjkD_MxxI10r2v4FqSQ8LuyjG/w640-h360/samarasa+new+add.JPG" width="500px" / />



Qries