HEALTH TIPS

ಛತ್ತೀಸಗಢ | ಗಣಿಯಲ್ಲಿ ನಕ್ಸಲರು ಇಟ್ಟ ಬಾಂಬ್ ಸ್ಫೋಟ: ಕಾರ್ಮಿಕನಿಗೆ ಗಾಯ

 ನಾರಾಯಣಪುರ: ಗಣಿ ಪ್ರದೇಶದಲ್ಲಿ ನಕ್ಸಲರು ಹುದುಗಿಸಿದ್ದ ಕಚ್ಚಾ ಬಾಂಬ್ ಸ್ಫೋಟಿಸಿ ಕಾರ್ಮಿಕನೋರ್ವ ಗಾಯಗೊಂಡ ಘಟನೆ ಛತ್ತೀಸಗಢದ ನಾರಾಯಣಪುರ ಜಿಲ್ಲೆಯಲ್ಲಿ ಬುಧವಾರ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಛೋಟೆ ಡೊಂಗರ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿರುವ ಆಮ್‌ದಾಯಿ ಘಾಟಿ ಕಬ್ಬಿನದ ಅದಿರು ಗಣಿಗಾರಿಕೆ ಪ್ರದೇಶದಲ್ಲಿ ಬುಧವಾರ ಬೆಳಿಗ್ಗೆ ಘಟನೆ ಸಂಭವಿಸಿದೆ.

ಈ ಸ್ಥಳ ರಾಜಧಾನಿ ರಾಯಪುರದಿಂದ 350 ಕಿ.ಮೀ ದೂರದಲ್ಲಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ.

ಗಾಯಗೊಂಡ ಕಾರ್ಮಿಕನನ್ನು ಛೋಟೆ ಡೊಂಗರ್‌ನ ಆಸ್ಪತ್ರೆಯೊಂದಕ್ಕೆ ಸೇರಿಸಲಾಗಿದೆ.

ಘಟನೆ ನಡೆದ ಪ್ರದೇಶದವನ್ನು ಜಯಸ್ವಾಲ್ ನೆಕೊ ಇಂಡಸ್ಟ್ರೀಸ್ ಲಿಮಿಟೆಡ್‌ಗೆ ಗಣಿಗಾರಿಗೆ ನಡೆಸಲು ನೀಡಲಾಗಿತ್ತು. ಈ ಯೋಜನೆಯನ್ನು ನಕ್ಸಲರು ಹಲವು ವರ್ಷಗಳಿಂದ ವಿರೋಧಿಸುತ್ತಿದ್ದರು.

2023ರ ನವೆಂಬರ್‌ನಲ್ಲಿ ಇದೇ ಗಣಿಯಲ್ಲಿ ನಕ್ಸಲರು ಇಟ್ಟಿದ್ದ ಕಚ್ಚಾ ಬಾಂಬ್ ಸ್ಫೋಟಗೊಂಡು ಇಬ್ಬರು ಕಾರ್ಮಿಕರು ಮೃತಪಟ್ಟಿದ್ದರು.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

src="https://blogger.googleusercontent.com/img/b/R29vZ2xl/AVvXsEik3hLMvgO1WDICUKu_VF5lQRG3CMZau_AmC5MorS73B9lRYpLdDKJGTnB8c-U47BHqrAJ7dkiQUqiUWGQ6qg9A5jtCXrPkzIP4GPJfI00HmwhHX-3VG35FjkD_MxxI10r2v4FqSQ8LuyjG/w640-h360/samarasa+new+add.JPG" width="500px" / />



Qries