HEALTH TIPS

ರಾಯ್‌ಬರೇಲಿಗೆ ರಾಹುಲ್‌ ಗಾಂಧಿ ಭೇಟಿ: ಪಕ್ಷದ ಕಾರ್ಯಕರ್ತರೊಂದಿಗೆ ಚರ್ಚೆ

Top Post Ad

Click to join Samarasasudhi Official Whatsapp Group

Qries

ರಾಯ್‌ಬರೇಲಿ: ಉತ್ತರ ಪ್ರದೇಶದ ರಾಯ್‌ಬರೇಲಿಗೆ ಎರಡು ದಿನಗಳ ಭೇಟಿ ನೀಡಿರುವ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್‌ ಗಾಂಧಿ  ಶುಕ್ರವಾರ ಪಕ್ಷದ ಕಾರ್ಯಕರ್ತರೊಂದಿಗೆ ಹಲವು ವಿಷಯಗಳ ಕುರಿತು ಚರ್ಚೆ ನಡೆಸಿದ್ದಾರೆ.

ರಾಹುಲ್ ಭೇಟಿ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ರಾಯ್‌ ಬರೇಲಿಯ ಕಾಂಗ್ರೆಸ್‌ ಪರಿಶಿಷ್ಟ ಜಾತಿ ಘಟಕದ ಅಧ್ಯಕ್ಷ ಸುನಿಲ್‌ ಕುಮಾರ್‌ ಗೌತಮ್, 'ಸಮುದಾಯದ 12 ಸದಸ್ಯರ ನಿಯೋಗವು ರಾಹುಲ್‌ ಅವರನ್ನು ಭೂಮೌ ನಿವಾಸದಲ್ಲಿ ಭೇಟಿಯಾಯಿತು.

ಪರಿಶಿಷ್ಟ ಜಾತಿ ಸಮುದಾಯದ ಸಮಸ್ಯೆಗಳ ಬಗ್ಗೆ ನಾವು ಚರ್ಚಿಸಿದ್ದೇವೆ. ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಎದುರಿಸುತ್ತಿರುವ ತೊಂದರೆಗಳ ಬಗ್ಗೆ ಅವರಿಗೆ ತಿಳಿಸಿದ್ದೇವೆ' ಎಂದು ಹೇಳಿದ್ದಾರೆ.

ಪಕ್ಷದ ಸಂಘಟನೆಯನ್ನು ಬಲಪಡಿಸುವುದರೊಂದಿಗೆ 2027ರ ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಗೆ ಸಿದ್ಧತೆಗಳನ್ನು ನಡೆಸುವ ಕುರಿತು ಕಾರ್ಯಕರ್ತರಿಗೆ ರಾಹುಲ್‌ ಗಾಂಧಿ ನಿರ್ದೇಶಿಸಿದ್ದಾರೆ ಎಂದು ಗೌತಮ್ ತಿಳಿಸಿದ್ದಾರೆ.

Below Post Ad

src="https://blogger.googleusercontent.com/img/b/R29vZ2xl/AVvXsEik3hLMvgO1WDICUKu_VF5lQRG3CMZau_AmC5MorS73B9lRYpLdDKJGTnB8c-U47BHqrAJ7dkiQUqiUWGQ6qg9A5jtCXrPkzIP4GPJfI00HmwhHX-3VG35FjkD_MxxI10r2v4FqSQ8LuyjG/w640-h360/samarasa+new+add.JPG" width="500px" / />



ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.
Qries