HEALTH TIPS

ಉತ್ತರ ಪ್ರದೇಶ | ಮಹಾ ಕುಂಭಮೇಳದಲ್ಲಿ ಭಾಗವಹಿಸದ ಜನರ ಮನೆ ಬಾಗಿಲಿಗೆ 'ಸಂಗಮ ಜಲ'

ಪ್ರಯಾಗ್‌ರಾಜ್: ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ ಮಾಡಲು ಸಾಧ್ಯವಾಗದವರಿಗೆ ಅವರ ಮನೆ ಬಾಗಿಲಿಗೆ ಸಂಗಮದ ಜಲ ವಿತರಿಸಲು ಉತ್ತರ ಪ್ರದೇಶದ ಸರ್ಕಾರ ಮುಂದಾಗಿದೆ.

ರಾಜ್ಯದ 75 ಜಿಲ್ಲೆಗಳ ಜನರಿಗೆ ಈ ಸಂಗಮದ ನೀರನ್ನು ವಿತರಿಸುವಂತೆ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ತುರ್ತು ಸೇವೆ ಮತ್ತು ಅಗ್ನಿಶಾಮಕ ಇಲಾಖೆಗೆ ಸೂಚಿಸಿದ್ದಾರೆ.

ಸಂಗಮದಲ್ಲಿ ಸ್ನಾನ ಮಾಡಲು ಆಗದ ಜನರ ಮನೆ ಬಾಗಿಲಿಗೆ ಸಂಗಮದ ಜಲವನ್ನು ವಿತರಿಸಲಾಗವುದು ಎಂದು ಈ ಹಿಂದೆ ಆದಿತ್ಯನಾಥ್ ಜನರಿಗೆ ಭರವಸೆ ನೀಡಿದ್ದರು.

ಈ ಪ್ರಕ್ರಿಯೆಯು ಇಂದಿನಿಂದ (ಶುಕ್ರವಾರ) ಪ್ರಾರಂಭವಾಗಲಿದ್ದು, ಜನರು ತಮ್ಮ ಮನೆಗಳಲ್ಲಿಯೇ ಗಂಗಾ ಜಲ ಸ್ವೀಕರಿಸಲು ವ್ಯವಸ್ಥೆ ಮಾಡಲಾಗಿದೆ ಎಂದು ಸರ್ಕಾರ ಪ್ರಕಟಣೆಯಲ್ಲಿ ತಿಳಿಸಿದೆ.

12 ವರ್ಷಗಳ ನಂತರ ನಡೆದ ಮಹಾ ಕುಂಭಮೇಳವು ಜನವರಿ 13 ರಿಂದ ಫೆಬ್ರುವರಿ 26 ರವರೆಗೆ ನಡೆದಿದೆ. ಪ್ರಯಾಗ್‌ರಾಜ್‌ನಲ್ಲಿ ನಡೆದ ಕುಂಭಮೇಳಕ್ಕೆ ದೇಶ ಮತ್ತು ವಿದೇಶಗಳಿಂದ ಸುಮಾರು 66 ಕೋಟಿಗೂ ಹೆಚ್ಚು ಜನರು ಆಗಮಿಸಿದ್ದರು ಎಂದು ಸರ್ಕಾರ ತಿಳಿಸಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

src="https://blogger.googleusercontent.com/img/b/R29vZ2xl/AVvXsEik3hLMvgO1WDICUKu_VF5lQRG3CMZau_AmC5MorS73B9lRYpLdDKJGTnB8c-U47BHqrAJ7dkiQUqiUWGQ6qg9A5jtCXrPkzIP4GPJfI00HmwhHX-3VG35FjkD_MxxI10r2v4FqSQ8LuyjG/w640-h360/samarasa+new+add.JPG" width="500px" / />



Qries