ಕಾಸರಗೋಡು: ಜಿಲ್ಲೆಯ ವಿವಿಧ ಶಿವಾಲಯಗಳಲ್ಲಿ ಶಿವರಾತ್ರಿ ಮಹೋತ್ಸವ ಫೆ, 26ರಂದು ಜರುಗಲಿದೆ. ಪೆರ್ಲ ಸನಿಹದ ಬಜಕೂಡ್ಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಶಿವರಾತ್ರಿಮಹೋತ್ಸವ ಅಂಗವಾಗಿ ಫೆ.26ರಂದು ಮಧ್ಯಾಹ್ನ ಶತರುದ್ರಾಭಿಷೇಕ ಮತ್ತು ಬಲಿವಾಡುಕೂಟ ನಡೆಯುವುದು. ಇದೇ ಸಂದರ್ಭ ಶ್ರೀ ಮಹಾಲಿಂಗೇಶ್ವರ ಭಜನಾಸಂಘದ 40ನೇ ವಾರ್ಷಿಕೋತ್ಸವ ಮತ್ತು ಶಿವರಾತ್ರಿ ಭಜನೆ ನಡೆಯುವುದು. ಕಾರ್ಯಕ್ರಮದ ಅಂಗವಾಗಿ ಸಂಜೆ 6.37ರಿಂದ ಮರುದಿನ ಬೆಳಗ್ಗೆ 6.49ರ ವರೆಗೆ ವಿವಿಧ ಭಜನಾ ತಂಡಗಳಿಂದ ಬಜನೆ ನಡೆಯುವುದು.
ಪೆರಡಾಲ ಶ್ರೀ ಉದನೇಶ್ವರ ದೇವಸ್ಥಾನದಲ್ಲಿ ಶಿವಪಂಚಾಕ್ಷರಿ ಜಲಲಿಪಿ ಅಭಿಯಾನ, ಪುಸ್ತಕ ಬಿಡುಗಡೆ ಸಮರಂಭ ನಡೆಯುವುದು.
ಎಡನೀರು ಸನಿಹದ ಪಾಡಿ ಕೈಲಾರ್ ಶ್ರೀ ಶಿವಕ್ಷೇತ್ರದಲ್ಲಿ ಮಹಾಶಿವರಾತ್ರಿ ಆಚರಣೆ, ಏಕಾದಶ ಮಹಾರುದ್ರಾಭಿಷೇಕ ಹಾಗೂ ಶಾಸ್ವತ ಚಪ್ಪರ ಸಮರ್ಪಣಾ ಕಾರ್ಯಕ್ರಮ ಫೆ. 26ರಂದು ಜರುಗಲಿದೆ. ಅಂದು ಬೆಳಗ್ಗೆ 8.15ಕ್ಕೆ ರುದ್ರಪಾರಾಯಣ, ಸಂಕಲ್ಪಾಭಿಷೇಕ, ಏಕಾದಶ ರುದ್ರಾಬಿಷೇಕ, ಭಜನೆ, ಕುಣಿತ ಭಜನೆ ನಡೆಯುವುದು.
ಮಧ್ಯಾಹ್ನ ನಡೆಯುವ ಸಮಾರಂಭದಲ್ಲಿ ಎಡನೀರು ಶ್ರೀ ಸಚ್ಚಿದಾನಂದ ಭಾರತೀ ಸ್ವಾಮೀಜಿ ಶಾಶ್ವತ ಚಪ್ಪರ ಲೋಕಾರ್ಪಣೆಗೈಯುವರು. ಬ್ರಹ್ಮಶ್ರೀ ಇರುವೈಲು ಕೇಶವ ತಂತ್ರಿ ದಿವ್ಯ ಉಪಸ್ಥಿತರಿರುವರು.
ಮಧೂರು ಶ್ರೀ ಮದನಂತೇಶ್ವರ ಸಿದ್ಧಿವಿನಾಯಕ ದೇವಸ್ಥಾನ, ಕಾಸರಗೋಡು ಶ್ರೀ ಮಲ್ಲಿಕಾರ್ಜುನ ದೇವಸ್ಥಾನ, ಶಿರಿಯ ಶ್ರೀ ಶಂಕರನಾರಾಯಣ ದೇವಸ್ಥಾನ, ಪರಕ್ಕಿಲ ಶ್ರೀ ಮಹಾದೇವ ದೇವಸ್ಥಾನ, ಪುಳ್ಕೂರ್ ಶ್ರೀ ಮಹಾದೇವ ದೇವಸ್ಥಾನ, ಅಡೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ, ನಾರಂಪಾಡಿ ಶ್ರೀ ಉಮಾಮಹೇಶ್ವರಿ ದೇವಸ್ಥಾನ, ವರ್ಕಾಡಿ ಪಾತೂರು ಶ್ರೀ ಸೂರ್ಯೇಶ್ವರ ದೇವಸ್ಥಾನ ಸಏರಿದಂತೆ ವಿವಿಧ ದೇಗುಲಗಳಲ್ಲಿ ಮಹಾಶಿವರಾತ್ರಿ ಅಂಗವಾಘಿ ಕಾರ್ಯಕ್ರಮ ಆಯೋಜಿಸಲಾಗಿದೆ.