HEALTH TIPS

ಶಶಿ ತರೂರ್ ವಿರುದ್ಧದ ರಾಜೀವ್ ಚಂದ್ರಶೇಖರ್ ದಾಖಲಿಸಿದ್ದ ಮಾನನಷ್ಟ ಮೊಕದ್ದಮೆ ವಜಾ

ನವದೆಹಲಿ: ಕಾಂಗ್ರೆಸ್ ಸಂಸದ ಶಶಿ ತರೂರ್ ವಿರುದ್ಧ ಬಿಜೆಪಿ ನಾಯಕ ರಾಜೀವ್ ಚಂದ್ರಶೇಖರ್ ಅವರು ಮಾನನಷ್ಟ ಆರೋಪದಡಿ ಸಲ್ಲಿಸಿದ್ದ ಕ್ರಿಮಿನಲ್ ಅರ್ಜಿಯನ್ನು ದೆಹಲಿ ನ್ಯಾಯಾಲಯ ಇಂದು (ಮಂಗಳವಾರ) ವಜಾಗೊಳಿಸಿದೆ.

'ಶಶಿ ತರೂರ್ ವಿರುದ್ಧ ರಾಜೀವ್ ಚಂದ್ರಶೇಖರ್ ಸಲ್ಲಿಸಿರುವ ಅರ್ಜಿಯಲ್ಲಿ ಯಾವುದೇ ಮಾನನಷ್ಟ ಅಂಶಗಳಿಲ್ಲ.

ಹಾಗಾಗಿ ತರೂರ್ ಅವರು ವಿಚಾರಣೆಗೆ ಹಾಜರಾಗುವ ಅಗತ್ಯತೆ ಇಲ್ಲ' ಎಂದು ಹೆಚ್ಚುವರಿ ಮುಖ್ಯ ಮ್ಯಾಜಿಸ್ಟ್ರೇಟ್ ಪರಾಸ್ ದಲಾಲ್ ತಿಳಿಸಿದ್ದಾರೆ.

ತರೂರ್ ಅವರು 2024ರ ಏಪ್ರಿಲ್‌ನಲ್ಲಿ ಸಾರ್ವಜನಿಕವಾಗಿ ಹಲವು ವೇದಿಕೆಗಳಲ್ಲಿ ಆಡಿರುವ ಮಾತುಗಳು ಮಾನಹಾನಿಕರವಾಗಿ ಇದ್ದವು. ಎಂದು ರಾಜೀವ್ ಅವರು ದೂರಿನಲ್ಲಿ ಹೇಳಿದ್ದರು.

ಮಾನಹಾನಿಕರ ರೀತಿಯಲ್ಲಿ ಮಾತನಾಡದಂತೆ ತರೂರ್ ಅವರಿಗೆ ಸೂಚಿಸಬೇಕು ಎಂದು ರಾಜೀವ್ ಅವರು ಕೋರಿದ್ದಾರೆ. ಅಲ್ಲದೆ, ತರೂರ್ ಅವರು ಸಾರ್ವಜನಿಕವಾಗಿ ಕ್ಷಮೆ ಯಾಚಿಸಬೇಕು, ಹೆಸರು ಹಾಳುಮಾಡಿದ್ದಕ್ಕಾಗಿ ತಮಗೆ ತರೂರ್ ಅವರು ₹10 ಕೋಟಿ ಪರಿಹಾರ ಕೊಡಬೇಕು ಎಂದು ಕೂಡ ರಾಜೀವ್ ಕೋರಿದ್ದರು.

2024ರ ಲೋಕಸಭಾ ಚುನಾವಣೆಯಲ್ಲಿ ರಾಜೀವ್ ಅವರು ಮತದಾರರಿಗೆ ಹಣ ನೀಡಿದ್ದರು ಎಂದು ತರೂರ್ ಅವರು ಸುದ್ದಿವಾಹಿನಿಗೆ ನೀಡಿದ ಸಂದರ್ಶನವೊಂದರಲ್ಲಿ ಹೇಳಿದ್ದರು ಎಂಬ ಆರೋಪ ಇದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

src="https://blogger.googleusercontent.com/img/b/R29vZ2xl/AVvXsEik3hLMvgO1WDICUKu_VF5lQRG3CMZau_AmC5MorS73B9lRYpLdDKJGTnB8c-U47BHqrAJ7dkiQUqiUWGQ6qg9A5jtCXrPkzIP4GPJfI00HmwhHX-3VG35FjkD_MxxI10r2v4FqSQ8LuyjG/w640-h360/samarasa+new+add.JPG" width="500px" / />



Qries