ನವದೆಹಲಿ: ಕೇಂದ್ರ ಸರ್ಕಾರ ಶುಕ್ರವಾರ ಡಾ. ಭೀಮರಾವ್ ರಾಮ್ಜಿ ಅಂಬೇಡ್ಕರ್ ಅವರ ಜನ್ಮ ದಿನಾಚರಣೆಯಾದ ಏಪ್ರಿಲ್ 14 ಅನ್ನು ಸಾರ್ವಜನಿಕ ರಜಾದಿನವೆಂದು ಘೋಷಿಸಿದೆ.
ಸಾಮಾಜಿಕ ಮಾಧ್ಯಮ ವೇದಿಕೆ X ನಲ್ಲಿ ಈ ಘೋಷಣೆ ಮಾಡಿದ ಕೇಂದ್ರ ಸಂಸ್ಕೃತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್, "ಸಂವಿಧಾನದ ಶಿಲ್ಪಿ, ಸಮಾಜದಲ್ಲಿ ಸಮಾನತೆಯ ಹೊಸ ಯುಗವನ್ನು ಸ್ಥಾಪಿಸಿದವರು, ನಮ್ಮ ಗೌರವಾನ್ವಿತ ಬಾಬಾ ಸಾಹೇಬ್ ಡಾ.ಭೀಮರಾವ್ ಅಂಬೇಡ್ಕರ್ ಜಿ ಅವರ ಜನ್ಮ ದಿನಾಚರಣೆಯಂದು ಈಗ ಸಾರ್ವಜನಿಕ ರಜಾದಿನವನ್ನು ಆಚರಿಸಲಾಗುವುದು" ಎಂದು ಹೇಳಿದ್ದಾರೆ.
"ಈ ನಿರ್ಧಾರವನ್ನು ತೆಗೆದುಕೊಳ್ಳುವ ಮೂಲಕ, ಬಾಬಾ ಸಾಹೇಬ್ ಅವರ ನಿಷ್ಠಾವಂತ ಅನುಯಾಯಿ, ಗೌರವಾನ್ವಿತ ಪ್ರಧಾನಿ ನರೇಂದ್ರ ಮೋದಿ ಅವರು ರಾಷ್ಟ್ರದ ಭಾವನೆಗಳನ್ನು ಗೌರವಿಸಿದ್ದಾರೆ" ಎಂದು ಶೇಖಾವತ್ ಹೇಳಿದರು.
ಡಾ. ಭೀಮರಾವ್ ಅಂಬೇಡ್ಕರ್ ಯಾರು?
ಬಾಬಾಸಾಹೇಬ್ ಅಂಬೇಡ್ಕರ್ ಎಂದು ವ್ಯಾಪಕವಾಗಿ ಕರೆಯಲ್ಪಡುವ ಡಾ. ಭೀಮರಾವ್ ರಾಮ್ಜಿ ಅಂಬೇಡ್ಕರ್ ಅವರು ಏಪ್ರಿಲ್ 14, 1891 ರಂದು ಮಧ್ಯಪ್ರದೇಶದ ಮಾವ್ನಲ್ಲಿ ಜನಿಸಿದರು. ಅವರು ಆಧುನಿಕ ಭಾರತವನ್ನು ರೂಪಿಸುವಲ್ಲಿ ಪ್ರಮುಖ ಪಾತ್ರ ವಹಿಸಿದರು. ದಲಿತ ಸಮುದಾಯದಲ್ಲಿ ಪ್ರಮುಖ ವ್ಯಕ್ತಿಯಾಗಿ ಗುರುತಿಸಲ್ಪಟ್ಟಿದ್ದಾರೆ.
ಅಂಬೇಡ್ಕರ್ ಅವರು ಸಾಮಾಜಿಕ ನ್ಯಾಯ ಮತ್ತು ಸಮಾನತೆಯ ಪ್ರಬಲ ಪ್ರತಿಪಾದಕರಾಗಿದ್ದರು. ಅಂಚಿನಲ್ಲಿರುವ ಮತ್ತು ತುಳಿತಕ್ಕೊಳಗಾದವರ ಹಕ್ಕುಗಳಿಗಾಗಿ ಹೋರಾಡುತ್ತಿದ್ದರು. ಭಾರತದ ಅಭಿವೃದ್ಧಿಗೆ ಅವರು ನೀಡಿದ ಮಹತ್ವದ ಕೊಡುಗೆಗಳಿಗಾಗಿ ಅವರನ್ನು ಸ್ಮರಿಸಲಾಗುತ್ತದೆ.