HEALTH TIPS

ನ್ಯಾಯಮೂರ್ತಿಗಳ ವಿರುದ್ಧ ಲೋಕ‍ಪಾಲ ಆದೇಶ: ಮಾ.18ರಂದು ಸುಪ್ರೀಂ ಕೋರ್ಟ್ ವಿಚಾರಣೆ

Top Post Ad

Click to join Samarasasudhi Official Whatsapp Group

Qries

ನವದೆಹಲಿ: ಹೈಕೋರ್ಟ್‌ನ ಹಾಲಿ ನ್ಯಾಯಮೂರ್ತಿಗಳ ವಿರುದ್ಧದ ಲೋಕಪಾಲ ಆದೇಶಕ್ಕೆ ತಡೆ ನೀಡಿದ ಸ್ವಯಂಪ್ರೇರಿತ ದೂರಿನ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಮಾರ್ಚ್ 18ಕ್ಕೆ ನಡೆಸಲಿದೆ.

ನ್ಯಾಯಮೂರ್ತಿಗಳಾದ ಬಿ.ಆರ್‌.ಗವಾಯಿ, ಸೂರ್ಯಕಾಂತ ಹಾಗೂ ಅಭಯ್‌ ಎಸ್‌.ಓಕಾ ಅವರಿದ್ದ ವಿಶೇಷ ಪೀಠ, ಈ ಅರ್ಜಿಯ ವಿಚಾರಣೆ ನಡೆಸಲಿದೆ.

ಹೈಕೋರ್ಟ್ ನ್ಯಾಯಮೂರ್ತಿಗಳ ವಿರುದ್ಧ ಲೋಕಪಾಲ ಹೊರಡಿಸಿದ್ದ ಆದೇಶ ಸಂಬಂಧ ಸುಪ್ರೀಂ ಕೋರ್ಟ್ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿತ್ತು.

ಫೆಬ್ರುವರಿ 20ರಂದು ಲೋಕ‍ಪಾಲ ಆದೇಶಕ್ಕೆ ತಡೆ ನೀಡಿತ್ತು.

'ಇಂಥ ನಡೆ ಆತಂಕ ಮೂಡಿಸುವಂಥದು ಹಾಗೂ ನ್ಯಾಯಾಂಗದ ಸ್ವಾತಂತ್ರ್ಯದ ಕುರಿತು ಚಿಂತೆಗೀಡು ಮಾಡುವಂತಹವುದಾಗಿದೆ' ಎಂದೂ ಹೇಳಿದೆ.

ಈ ವಿಚಾರವಾಗಿ ಪ್ರತಿಕ್ರಿಯೆ ಸಲ್ಲಿಸುವಂತೆ ಕೇಂದ್ರ ಸರ್ಕಾರ, ಲೋಕಪಾಲ ರಿಜಿಸ್ಟ್ರಾರ್ ಹಾಗೂ ಹೈಕೋರ್ಟ್‌ನ ಹಾಲಿ ಹೆಚ್ಚುವರಿ ನ್ಯಾಯಮೂರ್ತಿ ವಿರುದ್ಧ ದೂರು ಸಲ್ಲಿಸಿರುವ ವ್ಯಕ್ತಿಗೆ ಪೀಠವು ನೋಟಿಸ್‌ ಜಾರಿ ಮಾಡಿತ್ತು.

ಅಲ್ಲದೇ, ದೂರು ನೀಡಿರುವ ವ್ಯಕ್ತಿಯು ಹೆಚ್ಚುವರಿ ನ್ಯಾಯಮೂರ್ತಿಯ ಹೆಸರು ಬಹಿರಂಗಪಡಿಸುವುದನ್ನು ನಿರ್ಬಂಧಿಸಿ ಮಧ್ಯಂತರ ತಡೆಯಾಜ್ಞೆ ನೀಡಿದ ಪೀಠವು, ದೂರನ್ನು ಗೌಪ್ಯವಾಗಿಡುವಂತೆಯೂ ದೂರುದಾರನಿಗೆ ನಿರ್ದೇಶನ ನೀಡಿತ್ತು.

ವಿಚಾರಣೆ ವೇಳೆ, 'ಹೈಕೋರ್ಟ್‌ ನ್ಯಾಯಮೂರ್ತಿಗಳು, 'ಲೋಕಪಾಲ ಹಾಗೂ ಲೋಕಾಯುಕ್ತರ ಕಾಯ್ದೆ-2013'ರ ವ್ಯಾಪ್ತಿಗೆ ಒಳಪಡುವುದಿಲ್ಲ' ಎಂದು ಸಾಲಿಸಿಟರ್‌ ಜನರಲ್ ತುಷಾರ್ ಮೆಹ್ತಾ, ಪೀಠಕ್ಕೆ ತಿಳಿಸಿದ್ದರು,

'ಈ ವಿಚಾರ ಕುರಿತು ಸಿಜೆಐ ನೀಡುವ ನಿರ್ದೇಶನಗಳಿಗೆ ಕಾಯೋಣ' ಎಂದ ಪೀಠವು, ವಿಚಾರಣೆಯನ್ನು ಮಾರ್ಚ್‌ 18ಕ್ಕೆ ಮುಂದೂಡಿತ್ತು.

ಪ್ರಕರಣವೇನು?‌

ದೂರುದಾರನ ವಿರುದ್ಧ ಖಾಸಗಿ ಕಂಪನಿಯೊಂದು ಪ್ರಕರಣ ದಾಖಲಿಸಿತ್ತು. ಹೈಕೋರ್ಟ್‌ವೊಂದರ ನ್ಯಾಯಮೂರ್ತಿಯೊಬ್ಬರು ಈ ಅರ್ಜಿ ವಿಚಾರಣೆ ನಡೆಸಬೇಕಿತ್ತು.

ಕಂಪನಿಗೆ ಅನುಕೂಲ ಮಾಡಿಕೊಡುವುದಕ್ಕಾಗಿ, ಹೈಕೋರ್ಟ್‌ವೊಂದರ ಹಾಲಿ ಹೆಚ್ಚುವರಿ ನ್ಯಾಯಮೂರ್ತಿಯೊಬ್ಬರು, ಜಿಲ್ಲಾ ನ್ಯಾಯಾಲಯವೊಂದರ ಹೆಚ್ಚುವರಿ ನ್ಯಾಯಾಧೀಶ ಹಾಗೂ ಅರ್ಜಿ ವಿಚಾರಣೆ ನಡೆಸಬೇಕಿದ್ದ ಹೈಕೋರ್ಟ್‌ನ ನ್ಯಾಯಮೂರ್ತಿ ಮೇಲೆ ಪ್ರಭಾವ ಬೀರಿದ್ದರು ಎಂದು ಅರ್ಜಿದಾರ ಎರಡು ಪ್ರತ್ಯೇಕ ದೂರು ದಾಖಲಿಸಿದ್ದರು.

ಈ ದೂರುಗಳನ್ನು ಪರಿಗಣಿಸಿದ್ದ ಲೋಕಪಾಲ, ಹಾಲಿ ಹೆಚ್ಚುವರಿ ನ್ಯಾಯಮೂರ್ತಿ ವಿರುದ್ಧ ಜ.27ರಂದು ಆದೇಶ ಹೊರಡಿಸಿತ್ತು.

Below Post Ad

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.
Qries