ಪ್ರಯಾಗರಾಜ್: ಮಹಾ ಕುಂಭಮೇಳ ಮುಕ್ತಾಯವಾಗಿದ್ದು, ಪ್ರಯಾಗರಾಜ್ನಲ್ಲಿ 15 ದಿನಗಳ ವಿಶೇಷ ಸ್ವಚ್ಛತಾ ಅಭಿಯಾನವನ್ನು ಪ್ರಾರಂಭಿಸಲಾಗಿದೆ ಎಂದು ಉತ್ತರ ಪ್ರದೇಶ ಸರ್ಕಾರ ಶುಕ್ರವಾರ ತಿಳಿಸಿದೆ.
ಮೇಳದ ಬಳಿಕ, ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು, ಮಹಾ ಕುಂಭಮೇಳದ ಸಮಯದಲ್ಲಿ ನೈರ್ಮಲ್ಯ ಕಾಪಾಡಿದ ಕಾರ್ಮಿಕರ ಸೇವೆಗಾಗಿ ಅವರನ್ನು ಸನ್ಮಾನಿಸಿ, ಕುಂಭಮೇಳದ ಪ್ರದೇಶವನ್ನು ಸ್ವಚ್ಛಗೊಳಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಸ್ವಚ್ಛತಾ ಅಭಿಯಾನದ ನೇತೃತ್ವವನ್ನು ವಿಶೇಷ ಅಧಿಕಾರಿ ಆಕಾಂಕ್ಷಾ ರಾಣಾ ಅವರು ವಹಿಸಿದ್ದಾರೆ.