ಜ್ಯೆಪುರ: ಜೈಲಿನಲ್ಲಿರುವ ವ್ಯಕ್ತಿಯೊಬ್ಬ ಶುಕ್ರವಾರ ಬೆಳಿಗ್ಗೆ ಮುಖ್ಯಮಂತ್ರಿಗೆ ಭಜನ್ಲಾಲ್ ಶರ್ಮಾ ಅವರಿಗೆ ಕೊಲೆ ಬೆದರಿಕೆ ಹಾಕಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. 14 ತಿಂಗಳಲ್ಲಿ ಮುಖ್ಯಮಂತ್ರಿಗೆ ಕೊಲೆ ಬೆದರಿಕೆ ಬರುತ್ತಿರುವುದು ಇದು ನಾಲ್ಕನೇ ಬಾರಿ.
ಬಿಕಾನೇರ್ ಪೊಲೀಸ್ ನಿಯಂತ್ರಣ ಕೊಠಡಿಗೆ ಕರೆ ಮಾಡಿ ಮುಖ್ಯಮಂತ್ರಿಯನ್ನು ಕೊಲ್ಲುವುದಾಗಿ ಹೇಳಿದ್ದಾನೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಕವೇಂದ್ರ ಸಿಂಗ್ ಸಾಗರ್ ಹೇಳಿದ್ದಾರೆ.
ಬಿಕಾನೇರ್ ಕೇಂದ್ರ ಕಾರಾಗೃಹಕ್ಕೆ ತೆರಳಿದ ಪೊಲೀಸರು ಆರೋಪಿ ಆದಿಲ್ನನ್ನು ಬಂಧಿಸಿದ್ದಾರೆ. ಅವನ ಉದ್ದೇಶ ಮತ್ತು ಅವನ ಕೈಗೆ ಮೊಬೈಲ್ ಲಭಿಸಿದ್ದು ಹೇಗೆ ಎಂಬುದರ ಕುರಿತು ತನಿಖೆ ನಡೆಸಲಾಗುತ್ತಿದೆ ಎಂದು ಎಸ್ಪಿ ಹೇಳಿದ್ದಾರೆ.
ಆದಿಲ್ ಕೆಲವು ಮಾನಸಿಕ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದು, ಈ ಹಿಂದೆ ಅವನ ಕೈಗಳನ್ನು ಖುದ್ದು ಕತ್ತರಿಸಿಕೊಂಡಿದ್ದಾನೆ. ಆತನಿಂದ ಮೊಬೈಲ್ ವಶಪಡಿಸಿಕೊಳ್ಳಲಾಗಿದೆ ಎಂದು ಅವರು ಹೇಳಿದ್ದಾರೆ.
ಉಪ ಮುಖ್ಯಮಂತ್ರಿ ಪ್ರೇಮ್ ಚಂದ್ ಬೈರ್ವಾ ಅವರಿಗೆ ಜೈಪುರ ಕೇಂದ್ರ ಕಾರಾಗೃಹದ ಕೈದಿಯಿಂದ ಬುಧವಾರ ಕೊಲೆ ಬೆದರಿಕೆ ಬಂದಿತ್ತು. ಮರುದಿನ ಪೊಲೀಸರು ಮೂವರನ್ನು ಬಂಧಿಸಿದ್ದರು.