ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಅನಂತನಾಗ್ ಜಿಲ್ಲೆಯ ಅರಣ್ಯ ಪ್ರದೇಶದಲ್ಲಿದ್ದ ಭಯೋತ್ಪಾದಕರ ಅಡಗುದಾಣವನ್ನು ಭದ್ರತಾ ಪಡೆಗಳು ನಾಶ ಮಾಡಿದವು ಎಂದು ಅಧಿಕಾರಿಗಳು ಸೋಮವಾರ ತಿಳಿಸಿದರು.
ಖಚಿತ ಮಾಹಿತಿ ಮೇರೆಗೆ ಸುಂಗಾಲನ್ ಅರಣ್ಯದಲ್ಲಿ ಭದ್ರತಾ ಸಿಬ್ಬಂದಿ ಭಾನುವಾರ ಶೋಧ ನಡೆಸಿದರು.
ಈ ವೇಳೆ ಅಡಗುದಾಣ ಪತ್ತೆಯಾಗಿತ್ತು. ಸ್ಥಳದಲ್ಲಿದ್ದ ಮದ್ದು-ಗುಂಡುಗಳು, ಶಸ್ತ್ರಾಸ್ತ್ರಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ತಿಳಿಸಿದರು.