ಕಾಸರಗೋಡು: ಇತಿಹಾಸ ಪ್ರಸಿದ್ದ ಕಾಸರಗೋಡು ಶ್ರೀ ಮಲ್ಲಿಕಾರ್ಜುನ ದೇವಸ್ಥಾನದಲ್ಲಿ ಮಾರ್ಚ್ 19 ರಿಂದ 23 ರ ತನಕ ಜರಗಲಿರುವ "ವಾರ್ಷಿಕ ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆಯನ್ನು ಎಡನೀರು ಮಠಾಧೀಶರಾದ ಶ್ರೀ ಸಚ್ಚಿದಾನಂದ ಶ್ರೀಪಾದಂಗಳವರ ದಿವ್ಯ ಉಪಸ್ಥಿತಿಯಲ್ಲಿ ಮಲಬಾರ್ ದೇವಸ್ವಂ ಬೋರ್ಡ್ ಅಸಿಸ್ಟೆಂಟ್ ಕಮಿಷನರ್ ಕೆ.ಪಿ. ಪ್ರದೀಪ್ ಕುಮಾರ್ ಅವರು ಬಿಡುಗಡೆಗೊಳಿಸಿದರು.
ಕ್ಷೇತ್ರದ ಆಡಳಿತ ಸಮಿತಿ ಟ್ರಸ್ಟಿ ಅಧ್ಯಕ್ಷ ಎ.ಗೋವಿಂದನ್ ನಾಯರ್, ವಾರ್ಡ್ ಸದಸ್ಯೆ ಎ.ಶ್ರೀಲತಾ ಟೀಚರ್, ಧಾರ್ಮಿಕ ಮುಂದಾಳು ಡಾ.ಅನಂತ ಕಾಮತ್, ಕೆ.ಎನ್. ವೆಂಕಟ್ರಮಣ ಹೊಳ್ಳ, ಕ್ಷೇತ್ರದ ಕಾರ್ಯನಿರ್ವಾಹಣಾಧಿಕಾರಿ ಎಂ. ಮಹೇಶ್, ಬಿಂದು ಜುವೆಲ್ಲರಿ ಮಾಲಕಿ ಶೋಭಾ, ಪಾಲುದಾರರಾದ ಅಭಿಲಾಷ್, ಡಾ. ಅಜಿತೇಶ್, ಅರ್ಜುನನ್ ತಾಯಲಂಗಾಡಿ, ಟ್ರಸ್ಟಿ ಬೋರ್ಡ್ ಸದಸ್ಯೆ ಉಷಾ ಅರ್ಜನನ್, ಸದಸ್ಯರುಗಳಾದ ಉಮೇಶ್ ಅಣಂಗೂರು, ಮನೋಜ್ ಎ.ಸಿ, ಎಸ್.ವಿಟಿ. ಫ್ರಂಡ್ಸ್ ಸರ್ಕಲ್ ಕಾರ್ಯದರ್ಶಿ ಹರೀಶ್ ಕೆ.ಆರ್ ಮೊದಲಾದವರು ಉಪಸ್ಥಿತರಿದ್ದರು.