ತಿರುವನಂತಪುರಂ: ರಾಜ್ಯ ಸರ್ಕಾರ ಮಾದಕ ವ್ಯಸನದ ವಿರುದ್ಧ ಜನಪರ ಅಭಿಯಾನವನ್ನು ಪ್ರಾರಂಭಿಸುತ್ತಿದೆ. ಮಾದಕ ವ್ಯಸನದ ಪಿಡುಗನ್ನು ಎದುರಿಸಲು ಸರ್ಕಾರವು ಎಲ್ಲಾ ವರ್ಗದ ಸಾರ್ವಜನಿಕರು, ವಿವಿಧ ಇಲಾಖೆಗಳು ಮತ್ತು ಸಂಸ್ಥೆಗಳನ್ನು ಸಂಯೋಜಿಸುವ ಮೂಲಕ ಪ್ರಬಲ ಅಭಿಯಾನವನ್ನು ಮುನ್ನಡೆಸಲಿದೆ.
ಅಸ್ತಿತ್ವದಲ್ಲಿರುವ ಎಲ್ಲಾ ಅಭಿಯಾನಗಳನ್ನು ಒಟ್ಟುಗೂಡಿಸಿ ಏಪ್ರಿಲ್ನಿಂದ ಸಮಗ್ರ ಮಾದಕವಸ್ತು ವಿರೋಧಿ ಅಭಿಯಾನವನ್ನು ಜಾರಿಗೆ ತರಲಾಗುವುದು ಎಂದು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಹೇಳಿದರು.
ನಿನ್ನೆ ವಿಧಾನಸಭೆ ಕಟ್ಟಡದಲ್ಲಿ ನಡೆದ ಉನ್ನತ ಮಟ್ಟದ ಸಭೆಯಲ್ಲಿ ಅವರು ಮಾತನಾಡುತ್ತಿದ್ದರು.
ಈ ತಿಂಗಳ 30 ರಂದು ತಜ್ಞರು, ವಿದ್ಯಾರ್ಥಿ ಮತ್ತು ಯುವ ಸಂಘಟನೆಗಳು, ಚಲನಚಿತ್ರ, ಸಾಂಸ್ಕøತಿಕ ಮತ್ತು ಮಾಧ್ಯಮ ವಲಯದ ಸಂಘಟನೆಗಳು ಮತ್ತು ಶಿಕ್ಷಕ ಮತ್ತು ಪೋಷÀಕ ಸಂಘಟನೆಗಳ ಸಭೆ ನಡೆಸಿ ಕ್ರಿಯಾ ಯೋಜನೆಯನ್ನು ಸಿದ್ಧಪಡಿಸಲಾಗುವುದು.
ಮಾದಕ ದ್ರವ್ಯ ವಿರೋಧಿ ನೀಲನಕ್ಷೆ ತಯಾರಿಸಲು ಮುಖ್ಯ ಕಾರ್ಯದರ್ಶಿ ನೇತೃತ್ವದಲ್ಲಿ ವಿವಿಧ ಇಲಾಖೆಗಳನ್ನು ಒಳಗೊಂಡ ಸಮಿತಿಯನ್ನು ರಚಿಸಲಾಗುವುದು. ಮಾದಕ ದ್ರವ್ಯ ವಿರೋಧಿ ಜಾಗೃತಿ ಎಲ್ಪಿ ತರಗತಿಗಳಿಂದಲೇ ಪ್ರಾರಂಭವಾಗಬೇಕು ಎಂದು ಮುಖ್ಯಮಂತ್ರಿಗಳು ನಿರ್ದೇಶನ ನೀಡಿದರು.
ಮಕ್ಕಳನ್ನು ಕ್ರೀಡಾ ಕ್ಷೇತ್ರದತ್ತ ಆಕರ್ಷಿಸಲು ಹೆಚ್ಚಿನ ಕಾರ್ಯಕ್ರಮಗಳನ್ನು ಆಯೋಜಿಸಲಾಗುವುದು. ಹಾಸ್ಟೆಲ್ಗಳು ಮತ್ತು ಸಾರ್ವಜನಿಕ ಸ್ಥಳಗಳು ಮಾದಕ ವಸ್ತುಗಳಿಂದ ಮುಕ್ತವಾಗಿರುವುದನ್ನು ಖಚಿತಪಡಿಸಿಕೊಳ್ಳಲು ಕ್ರಮಗಳನ್ನು ತೆಗೆದುಕೊಳ್ಳಲಾಗುವುದು.
ಪೋಲೀಸ್ ಮತ್ತು ಅಬಕಾರಿ ಇಲಾಖೆಯ ಜಾರಿ ಚಟುವಟಿಕೆಗಳನ್ನು ಮತ್ತಷ್ಟು ವಿಸ್ತರಿಸಲಾಗುವುದು. ಸ್ಥಳೀಯಾಡಳಿತ ಇಲಾಖೆಯು ಮಾದಕ ವಸ್ತು ಮಾರಾಟ ಮಾಡುವ ಅಂಗಡಿಗಳನ್ನು ಮುಚ್ಚಲು ಕ್ರಮ ಕೈಗೊಳ್ಳಲಿದೆ.
ಮಾದಕ ವಸ್ತುಗಳ ಉಪಸ್ಥಿತಿಯನ್ನು ಪತ್ತೆಹಚ್ಚಲು ಆಧುನಿಕ ಉಪಕರಣಗಳನ್ನು ಖರೀದಿಸಲಾಗುವುದು. ಸ್ನಿಫರ್ ನಾಯಿಗಳ ಉಪಸ್ಥಿತಿ ಹೆಚ್ಚಾಗುತ್ತದೆ.
ಆನ್ಲೈನ್ ಮಾದಕವಸ್ತು ಕಳ್ಳಸಾಗಣೆ ತಡೆಗಟ್ಟುವ ಕ್ರಮಗಳನ್ನು ಬಲಪಡಿಸಲಾಗುವುದು. ವಿಮಾನ ನಿಲ್ದಾಣಗಳು, ರೈಲ್ವೆಗಳು ಮತ್ತು ಬಂದರುಗಳನ್ನು ಕೇಂದ್ರೀಕರಿಸಿ ತಪಾಸಣೆಗಳನ್ನು ತೀವ್ರಗೊಳಿಸಲಾಗುವುದು.
ಗಡಿಗಳಲ್ಲಿ ಪೋಲೀಸ್ ತಪಾಸಣೆಯನ್ನು ಬಲಪಡಿಸಲಾಗುವುದು. ಕೊರಿಯರ್, ಪಾರ್ಸೆಲ್ ಮತ್ತು ಪ್ರವಾಸಿ ವಾಹನಗಳು ಸೇರಿದಂತೆ ಕೇರಳದ ಗಡಿಯನ್ನು ಪ್ರವೇಶಿಸುವ ವಾಹನಗಳನ್ನು ಪರಿಶೀಲಿಸಲು ಸೂಚನೆಗಳನ್ನು ನೀಡಲಾಗಿದೆ ಎಂದು ಮುಖ್ಯಮಂತ್ರಿ ಹೇಳಿದರು.