HEALTH TIPS

ತೇಜಸ್ ಯುದ್ಧ ವಿಮಾನದಿಂದ ಅಸ್ತ್ರ ಕ್ಷಿಪಣಿ ಯಶಸ್ವಿ ಪರೀಕ್ಷೆ

Top Post Ad

Click to join Samarasasudhi Official Whatsapp Group

Qries

ನವದೆಹಲಿ: ದೇಶೀಯವಾಗಿ ನಿರ್ಮಿತ ತೇಜಸ್ ಹಗುರ ಯುದ್ಧ ವಿಮಾನದಿಂದ (ಎಲ್‌ಸಿಎ) ಅಸ್ತ್ರ ಕ್ಷಿಪಣಿಯ ಯಶಸ್ವಿ ಪರೀಕ್ಷಾರ್ಥ ಪ್ರಯೋಗ ನಡೆಸಲಾಗಿದೆ ಎಂದು ಕೇಂದ್ರ ರಕ್ಷಣಾ ಸಚಿವಾಲಯ ತಿಳಿಸಿದೆ. 

ಬುಧವಾರದಂದು (ಮಾರ್ಚ್ 12) ಈ ಪರೀಕ್ಷೆ ನಡೆಸಲಾಯಿತು. ದೇಶಿ ನಿರ್ಮಿತ ಅಸ್ತ್ರ, ಏರ್-ಟು-ಏರ್ (ಗಾಳಿಯಿಂದ ಗಾಳಿಗೆ ದಾಳಿ ನಡೆಸಬಲ್ಲ) ಮಿಸೈಲ್ ಆಗಿದೆ.

ಒಡಿಶಾದ ಚಾಂದಿಪುರ ಕರಾವಳಿಯಲ್ಲಿ ಏರೋನಾಟಿಕಲ್ ಡೆವಲಪ್‌ಮೆಂಟ್ ಏಜೆನ್ಸಿ (ಎಡಿಎ) ಕ್ಷಿಪಣಿಯ ಪರೀಕ್ಷಾರ್ಥ ಪ್ರಯೋಗ ಹಮ್ಮಿಕೊಂಡಿತು. ಈ ಸಂಬಂಧ ಚಿತ್ರವನ್ನು ಹಂಚಿಕೊಂಡಿದೆ.

ಈ ಪರೀಕ್ಷಾರ್ಥ ಪ್ರಯೋಗವು ಯಶಸ್ವಿಯಾಗಿದ್ದು, ಎಲ್ಲ ಉದ್ದೇಶಗಳನ್ನು ನಿಖರವಾಗಿ ಈಡೇರಿಸಿದೆ ಎಂದು ರಕ್ಷಣಾ ಸಚಿವಾಲಯ ತಿಳಿಸಿದೆ.

ಅಸ್ತ್ರ ಕ್ಷಿಪಣಿಯನ್ನು ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆಯಲ್ಲಿ (ಡಿಆರ್‌ಡಿಒ) ಅಭಿವೃದ್ಧಿಪಡಿಸಲಾಗಿದೆ. 100 ಕಿ.ಮೀ.ಗೂ ಹೆಚ್ಚಿನ ವ್ಯಾಪ್ತಿಯ ಗುರಿಯನ್ನು ಹೊಡೆದುರುಳಿಸಬಲ್ಲ ಸಾಮರ್ಥ್ಯವನ್ನು ಹೊಂದಿದೆ.

ಈ ಕ್ಷಿಪಣಿಯು ಸುಧಾರಿತ ಗೈಡನ್ಸ್ ಮತ್ತು ನೇವಿಗೇಷನ್ ವ್ಯವಸ್ಥೆಯನ್ನು ಹೊಂದಿದ್ದು, ಹೆಚ್ಚಿನ ನಿಖರತೆಯೊಂದಿಗೆ ಗುರಿಯನ್ನು ನಾಶಮಾಡಲು ಸಹಕಾರಿಯಾಗಲಿದೆ.

ಅಸ್ತ್ರ ಕ್ಷಿಪಣಿಯನ್ನು ಈಗಾಗಲೇ ಭಾರತೀಯ ವಾಯುಪಡೆಗೆ ಸೇರ್ಪಡೆಗೊಳಿಸಲಾಗಿದೆ.

ಈ ಯಶಸ್ವಿ ಪ್ರಯೋಗವು ತೇಜಸ್ ಎಲ್‌ಸಿಎ ಎಫ್ ಎಂಕೆ1ಎ ಯುದ್ಧ ವಿಮಾನದ ಕಾರ್ಯಕ್ಷಮತೆಯಲ್ಲಿ ಮಹತ್ವದ ಮೈಲಿಗಲ್ಲು ಆಗಿದೆ.

Below Post Ad

src="https://blogger.googleusercontent.com/img/b/R29vZ2xl/AVvXsEik3hLMvgO1WDICUKu_VF5lQRG3CMZau_AmC5MorS73B9lRYpLdDKJGTnB8c-U47BHqrAJ7dkiQUqiUWGQ6qg9A5jtCXrPkzIP4GPJfI00HmwhHX-3VG35FjkD_MxxI10r2v4FqSQ8LuyjG/w640-h360/samarasa+new+add.JPG" width="500px" / />



ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.
Qries