HEALTH TIPS

ಕೇರಳ: ಮೀನು ಗಂಟಲಲ್ಲಿ ಸಿಲುಕಿಕೊಂಡು ಯುವಕ ಸಾವು!

Top Post Ad

Click to join Samarasasudhi Official Whatsapp Group

Qries

ಆಲಪ್ಪುಳ:ಭತ್ತದ ಗದ್ದೆಯಲ್ಲಿ ಮೀನು ಹಿಡಿಯುತ್ತಿದ್ದಾಗ ಮೀನುವೊಂದು ಗಂಟಲೊಳಗೆ ಹೋಗಿ ಯುವಕನೋರ್ವ ಸಾವನ್ನಪ್ಪಿರುವ ಘಟನೆ ಆಲಪ್ಪುಳ ಸಮೀಪದ ಕಾಯಂಕುಲಂನಲ್ಲಿ ಭಾನುವಾರ ನಡೆದಿದೆ.

ಮೃತ ಯುವಕನನ್ನು ಪುತ್ತುಪ್ಪಲ್ಲಿಯ ಆದರ್ಶ್ ಅಲಿಯಾಸ್ ಉನ್ನಿ (25) ಎಂದು ಗುರುತಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಸಂಜೆ 4.30ರ ಸುಮಾರಿಗೆ ತನ್ನ ಸ್ನೇಹಿತರೊಂದಿಗೆ ಗದ್ದೆಗೆ ನೀರು ಹಾಯಿಸಿ ಮೀನು ಹಿಡಿಯುತ್ತಿದ್ದಾಗ ಈ ಘಟನೆ ನಡೆದಿದೆ. ಇನ್ನೊಂದು ಮೀನನ್ನು ಹಿಡಿಯಲು ಯತ್ನಿಸುತ್ತಿದ್ದಾಗ ಮೀನೊಂದು ಆತನ ಬಾಯಿ ಕಚ್ಚಿಕೊಂಡು ಗಂಟಲೊಳಗೆ ಹೋಗಿ ಸಿಲುಕಿಕೊಂಡಿದೆ. ಕೂಡಲೇ ಯುವಕನನ್ನು ಓಚಿರ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೂ ಆತನ ಪ್ರಾಣ ಉಳಿಸಲಾಗಲಿಲ್ಲ.

ಆದರ್ಶ್ ಮೃತದೇಹವನ್ನು ಕಾಯಂಕುಲಂ ತಾಲೂಕು ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಸಂಬಂಧ ಭಾರತೀಯ ನಾಗರಿಕ ಸುರಕ್ಷಾ ಸಂಹಿತಾ (ಬಿಎನ್‌ಎಸ್‌ಎಸ್) ಸೆಕ್ಷನ್ 194 ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

Below Post Ad

src="https://blogger.googleusercontent.com/img/b/R29vZ2xl/AVvXsEik3hLMvgO1WDICUKu_VF5lQRG3CMZau_AmC5MorS73B9lRYpLdDKJGTnB8c-U47BHqrAJ7dkiQUqiUWGQ6qg9A5jtCXrPkzIP4GPJfI00HmwhHX-3VG35FjkD_MxxI10r2v4FqSQ8LuyjG/w640-h360/samarasa+new+add.JPG" width="500px" / />



ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.
Qries