HEALTH TIPS

ಎಲ್‌ಇಟಿ ಕಮಾಂಡರ್‌ ಹತ್ಯೆ

ನವದೆಹಲಿ: ಭಾರತಕ್ಕೆ ಬೇಕಾಗಿದ್ದ ಲಷ್ಕರ್‌-ಎ-ತಯಬಾ (ಎಲ್‌ಇಟಿ) ಸಂಘಟನೆಯ ಕಮಾಂಡರ್‌ನನ್ನು ಪಾಕಿಸ್ತಾನದಲ್ಲಿ ಗುಂಡಿಕ್ಕಿ ಹತ್ಯೆ ಮಾಡಲಾಗಿದೆ.

ಎಲ್‌ಇಟಿಯ ಉನ್ನತ ಕಮಾಂಡರ್‌ ಆಗಿದ್ದ ಜಿಯಾ- ಉರ್- ರೆಹಮಾನ್‌ ಅಲಿಯಾಸ್‌ ನದೀಮ್‌ನನ್ನು ಶನಿವಾರ ಸಂಜೆ ಪಾಕಿಸ್ತಾನದ ಪಂಜಾಬ್‌ನ ಝೇಲಮ್‌ ಪ್ರದೇಶದಲ್ಲಿ ಹತ್ಯೆ ಮಾಡಲಾಗಿದೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ.

ಜಮ್ಮು- ಕಾಶ್ಮೀರದಲ್ಲಿ ನಡೆದ ಹಲವಾರು ಭಯೋತ್ಪಾದನಾ ದಾಳಿಗಳಲ್ಲಿ ಈತನ ಕೈವಾಡವಿತ್ತು.

ಬಂದೂಕುಧಾರಿಗಳು ನಡೆಸಿದ ದಾಳಿಯಲ್ಲಿ ರೆಹಮಾನ್‌ನ ಭದ್ರತಾ ಸಿಬ್ಬಂದಿಯೂ ಹತ್ಯೆಯಾಗಿದ್ದಾರೆ.

ಎಲ್‌ಇಟಿ ಸಂಸ್ಥಾಪಕ ಹಾಗೂ ಮುಂಬೈ ಮೇಲೆ ನಡೆಸಿದ ಭಯೋತ್ಪಾದನಾ ದಾಳಿಯ ರೂವಾರಿ ಹಫೀಜ್‌ ಸಯ್ಯದ್‌ನ ನಿಕಟವರ್ತಿಗಳಲ್ಲಿ ಈತನೂ ಒಬ್ಬನಾಗಿದ್ದ ಎನ್ನಲಾಗಿದೆ.

ಜಮ್ಮು- ಕಾಶ್ಮೀರದ ಪೂಂಛ್‌, ರಜೌರಿ ಭಾಗದಲ್ಲಿ ಭಯೋತ್ಪಾದನಾ ಚಟುವಟಿಕೆ ನಡೆಸಲು ತಂತ್ರ ರೂಪಿಸುತ್ತಿದ್ದ ಈತ, ಎಲ್‌ಇಟಿಯ ಚಟುವಟಿಕೆಗಳನ್ನು ಈ ಪ್ರದೇಶದಲ್ಲಿ ವಿಸ್ತರಿಸಿದ್ದ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

src="https://blogger.googleusercontent.com/img/b/R29vZ2xl/AVvXsEik3hLMvgO1WDICUKu_VF5lQRG3CMZau_AmC5MorS73B9lRYpLdDKJGTnB8c-U47BHqrAJ7dkiQUqiUWGQ6qg9A5jtCXrPkzIP4GPJfI00HmwhHX-3VG35FjkD_MxxI10r2v4FqSQ8LuyjG/w640-h360/samarasa+new+add.JPG" width="500px" / />



Qries