ಬದಿಯಡ್ಕ: ಕ್ಯಾಂಪ್ಕೋ ಸಂಸ್ಥೆಯ `ಸಾಂತ್ವನ' ಯೋಜನೆಯಡಿಯಲ್ಲಿ ಕ್ಯಾಂಪ್ಕೋ ಬದಿಯಡ್ಕ ಶಾಖೆಯ ಸಕ್ರಿಯ ಸದಸ್ಯ ಶಿವಶಂಕರ ಭಟ್ ಗುಣಾಜೆ ಅವರ ಆಂಜಿಯೋಪ್ಲಾಸ್ಟಿ ಚಿಕಿತ್ಸೆಗೆ ಸಹಾಯ ಧನದ ಮೊತ್ತ ರೂ.35,220 (ರೂಪಾಯಿ ಮೂವತ್ತ ಐದು ಸಾವಿರದ ಇನ್ನೂರ ಇಪ್ಪತ್ತು) ಚೆಕ್ನ್ನು ಸಂಸ್ಥೆಯ ಉಪಾಧ್ಯಕ್ಷ ಶಂಕರನಾರಾಯಣ ಖಂಡಿಗೆ ಇವರು ಬುಧವಾರ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಸಂಸ್ಥೆಯ ನಿರ್ದೇಶಕ, ಪ್ರಾದೇಶಿಕ ವ್ಯವಸ್ಥಾಪಕ ಚಂದ್ರ ಎಂ ಹಾಗೂ ಬದಿಯಡ್ಕ ಶಾಖೆಯ ವ್ಯವಸ್ಥಾಪಕÀ ಶ್ಯಾಂ ಪ್ರಶಾಂತ ಬಿ ಉಪಸ್ಥಿತರಿದ್ದರು.