HEALTH TIPS

ಕಾರ್ಮಾರಿನಲ್ಲಿ ಇಂದು ಬ್ರಹ್ಮಕಲಶಾಭಿಷೇಕ; ರಾತ್ರಿ ಶ್ರೀದೇವರ ಉತ್ಸವ

ಬದಿಯಡ್ಕ: ಕಾರ್ಮಾರು ಶ್ರೀ ಮಹಾವಿಷ್ಣು ದೇವರ ಬ್ರಹ್ಮಕಲಶಾಭಿಷೇಕ ಮಾರ್ಚ್ 1ರಿಂದ ಬ್ರಹ್ಮಶ್ರೀ ದೇಲಂಪಾಡಿ ಗಣೇಶ ತಂತ್ರಿಗಳ ನೇತೃತ್ವದಲ್ಲಿ ಆರಂಭಗೊಂಡು ಇಂದು(ಮಾ.9)  ಸಹಸ್ರ ಕಲಶಾಭಿಷೇಕ, ಬ್ರಹ್ಮಕಲಶಾಭಿಷೇಕಗಳೊಂದಿಗೆ ಸಂಪನ್ನಗೊಳ್ಳಲಿದೆ. 

ಪ್ರಾತಃಕಾಲ 6 ಗಂಟೆಗೆ ಗಣಪತಿ ಹೋಮ, ಕವಾಟೋದ್ಘಾಟನೆ, ಶಾಂತಿ ಪ್ರಾಯಶ್ಚಿತ್ತ ಮತ್ತು ತತ್ವ ಹೋಮಗಳ ಕಲಶಾಭಿಷೇಕ, 1008 ಕಲಶಾಭಿಷೇಕ, ಬ್ರಹ್ಮಕಲಶಾಭಿಷೇಕ, ಅವಭೃತ ಪ್ರೋಕ್ಷಣೆ, ಮಹಾಪೂಜೆ, ಮಂಗಲ ಮಂತ್ರಾಕ್ಷತೆ ಜರಗಲಿದೆ. ಮಧ್ಯಾಹ್ನ ಮಹಾಅನ್ನಸಂತರ್ಪಣೆ, ಸಂಜೆ 6ರಿಂದ ಕಾರ್ಮಾರು ಶ್ರೀ ವಿಷ್ಣುಲೀಲಾ ಮೈದಾನದಲ್ಲಿ ಶ್ರೀ ಮಹಾವಿಷ್ಣು ಯುವಕ ವೃಂದ ಕಾರ್ಮಾರು ಪ್ರಾಯೋಜಕತ್ವದಲ್ಲಿ `ಕಾರ್ಮಾರು ಉತ್ಸವ 2025' ಮೆಗಾಗಾನಮೇಳ, 7 ಗಂಟೆಯಿಂದ ಶ್ರೀದೇವರ ಉತ್ಸವ ಬಲಿ, 7.15ರಿಂದ ತಿರುವಾದಿರ ಮಹಿಳಾ ಸಂಘ ಕಾರ್ಮಾರು, 7.30ರಿಂದ ಕಾರ್ಮಾರು ಶ್ರೀ ವಿಷ್ಣುಲೀಲಾ ಮೈದಾನದ ಬೆಡಿಕಟ್ಟೆಯಲ್ಲಿ ಶ್ರೀದೇವರ ಪೂಜೆ, ಸುಡುಮದ್ದು ಪ್ರದರ್ಶನ, 11.30ರಿಂದ ಶ್ರೀಕ್ಷೇತ್ರದಲ್ಲಿ ಬಟ್ಟಲುಕಾಣಿಕೆ, ರಾಜಾಂಗಣ ಪ್ರಸಾದ, ಮಂತ್ರಾಕ್ಷತೆಯೊಂದಿಗೆ ಕಾರ್ಯಕ್ರಮ ಸಂಪನ್ನವಾಗಲಿದೆ.


ಶನಿವಾರದಂದು ಬೆಳಗ್ಗೆ ಗಣಪತಿ ಹೋಮ, ಶಾಂತಿ ಹೋಮ, ಪ್ರಾಯಶ್ಚಿತ್ತ ಹೋಮ, ತತ್ವಹೋಮ, ತತ್ವಕಲಶ ಪೂಜೆ, ಕುಂಭೇಶ ಕರ್ಕರಿ ಪೂಜೆ, ಅಂಕುರ ಪೂಜೆ, ಸೋಪಾನ ಪೂಜೆ, ಬ್ರಹ್ಮಕಲಶ ಪೂಜೆ ನಡೆಯಿತು. ರಾತ್ರಿ 6ರಿಂದ ಪರಿಕಲಶ ಪೂಜೆ, ಅವಾಸ ಹೋಮ, ಅವಾಸ ಬಲಿ, ಕಲಶಾವಾಸ, ಸೋಪಾನ ಪೂಜೆ, ಮಹಾಬಲಿ ಪೀಠಾವಾಸ ನಡೆಯಿತು. ಸಾಂಸ್ಕøತಿಕ ಕಾರ್ಯಕ್ರಮದ ಅಂಗವಾಗಿ ಸುರೇಶ್ ಕಂಬಾರು ಮತ್ತು ಬಳಗದವರಿಂದ ಕರ್ನಾಟಕ ಶಾಸ್ತ್ರೀಯ ಸಂಗೀತ, ವಿದ್ವಾನ್ ಪ್ರಭಾಕರ ಕುಂಜಾರು ಮತ್ತು ಶಿಷ್ಯವೃಂದದವರಿಂದ ವಯಲಿನ್. ವಿದುಷಿ ರಾಧಾ ಮುರಳೀದರನ್ ಕಾಸರಗೋಡು ಮತ್ತು ಬಳಗದ ಕರ್ನಾಟಕ ಶಾಸ್ತ್ರೀಯ ಸಂಗೀತ, ವಿದುಷಿ ಸರಸ್ವತಿಕೃಷ್ಣನ್ ಬೇಳ ಕರ್ನಾಟಕ ಶಾಸ್ತ್ರೀಯ ಸಂಗೀತ, ರಾತ್ರಿ ವಿದುಷಿ ಯೋಗೀಶ್ವರಿ ಜಯಪ್ರಕಾಶ್ ವೈಷ್ಣವಿ ನಾಟ್ಯಾಲಯ ಪುತ್ತೂರು ಇವರಿಂದ ಶ್ರೀರಾಮ ಪುನರಾಗಮನ ನೃತ್ಯರೂಪಕ ಪ್ರದರ್ಶನಗೊಂಡಿತು.


ಇಂದು ಮೈಸೂರು ರಾಜರ ಆಗಮನ : ಧಾರ್ಮಿಕ ಸಭೆ

ಇಂದು ಸಂಜೆ 3.30ರಿಂದ ಸಮಾರೋಪ ಸಮಾರಂಭ ನಡೆಯಲಿದೆ. ಕರ್ನಾಟಕ ಸರ್ಕಾರದ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷ ಟಿ.ಶ್ಯಾಮ ಭಟ್ ಅಧ್ಯಕ್ಷತೆ ವಹಿಸಲಿದ್ದಾರೆ. ಮೈಸೂರು ರಾಜ, ಸಂಸದ ಯಧುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಉದ್ಘಾಟಿಸಲಿದ್ದಾರೆ. ಪರಮಪೂಜ್ಯ ಶ್ರೀ ಸಚ್ಚಿದಾನಂದ ಭಾರತೀ ಶ್ರೀಗಳು ಶ್ರೀಎಡನೀರು ಮಠ ಆಶೀರ್ವಚನ ನೀಡಲಿದ್ದಾರೆ. ಬ್ರಹ್ಮಶ್ರೀ ದೇಲಂಪಾಡಿ ಗಣೇಶ ತಂತ್ರಿಗಳು, ಬ್ರಹ್ಮಶ್ರೀ ಉಳಿಯ ವಿಷ್ಣು ಆಸ್ರ ಅವರು ವೇದಿಕೆಯಲ್ಲಿ ಉಪಸ್ಥಿತರಿದ್ದು ಆಶೀರ್ವದಿಸಲಿರುವರು. ಕೊಲ್ಲೂರು ಶ್ರೀ ಮೂಕಾಂಬಿಕಾ ಕ್ಷೇತ್ರದ ಆನುವಂಶಿಕ ಅರ್ಚಕ ಬ್ರಹ್ಮಶ್ರೀ ನರಸಿಂಹ ಅಡಿಗ, ಉದ್ಯಮಿ ಮಹಾಬಲೇಶ್ವರ ಭಟ್ ಎಡೆಕ್ಕಾನ, ಆರ್.ಕೆ. ಭಟ್ ಬೆಂಗಳೂರು ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ. ದೈವಜ್ಞ ಕೇಶವ ಭಟ್ ನೆಲ್ಲಿಕಳೆಯ, ದೈವಜ್ಞ ಸದಾನಂದ ಕಾರಂತ, ನಾರಾಯಣ ಭಟ್ ಪಟ್ಟಾಜೆ ಗೌರವ ಉಪಸ್ಥಿತರಿರುವರು. ನ್ಯಾಯವಾದಿ  ವೆಂಕಟ್ರಮಣ ಭಟ್ ಚಂಬಲ್ತಿಮಾರು, ರಾಮಪ್ರಸಾದ ಕಾಸರಗೋಡು, ಗೋಪಾಲ ಭಟ್ ಪಿ.ಎಸ್.ಪಟ್ಟಾಜೆ, ರಾಮ ಕೆ.ಕಾರ್ಮಾರು ಉಪಸ್ಥಿತರಿರುವರು. ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಮಧುಸೂದನ ಆಯರ್ ಮಂಗಳೂರು ಸ್ವಾಗತಿಸಿ, ಪ್ರಧಾನ ಕಾರ್ಯದರ್ಶಿ ಮಹೇಶ್ ವಳಕ್ಕುಂಜ ವಂದಿಸಲಿದ್ದಾರೆ.  


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

src="https://blogger.googleusercontent.com/img/b/R29vZ2xl/AVvXsEik3hLMvgO1WDICUKu_VF5lQRG3CMZau_AmC5MorS73B9lRYpLdDKJGTnB8c-U47BHqrAJ7dkiQUqiUWGQ6qg9A5jtCXrPkzIP4GPJfI00HmwhHX-3VG35FjkD_MxxI10r2v4FqSQ8LuyjG/w640-h360/samarasa+new+add.JPG" width="500px" / />



Qries