: ಡಿ-ಮಾರ್ಟ್ ಮಳಿಗೆಯ. ಸಿಬ್ಬಂದಿಯೊಬ್ಬರು ಮರಾಠಿ ಮಾತನಾಡದ್ದಕ್ಕೆ ರಾಜ್ ಠಾಕ್ರೆ ನೇತೃತ್ವದ ಮಹಾರಾಷ್ಟ್ರ ನವನಿರ್ಮಾಣ ಸೇನೆ (ಎಂಎನ್ಎಸ್) ಕಾರ್ಯಕರ್ತರು ಕಪಾಳಮೋಕ್ಷ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಪಶ್ಚಿಮ ಅಂಧೇರಿಯ ವರ್ಸೋವಾದಲ್ಲಿರುವ ಡಿ-ಮಾರ್ಟ್ ಮಳಿಗೆಯಲ್ಲಿ ಮಂಗಳವಾರ ಈ ಘಟನೆ ನಡೆದಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
'ನಾನು ಮರಾಠಿಯಲ್ಲಿ ಮಾತನಾಡುವುದಿಲ್ಲ. ಬದಲಾಗಿ ಹಿಂದಿಯಲ್ಲಿ ಮಾತ್ರ ಮಾತನಾಡುತ್ತೇನೆ. ನೀವು ಏನು ಬೇಕಾದರೂ ಮಾಡಿಕೊಳ್ಳಿ' ಎಂದು ಡಿ-ಮಾರ್ಟ್ ಸಿಬ್ಬಂದಿಯು ಗ್ರಾಹಕರ ಜತೆ ವಾಗ್ವಾದ ನಡೆಸುತ್ತಿರುವ ವಿಡಿಯೊ ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡಿತ್ತು.
ಈ ವಿಡಿಯೊ ವೀಕ್ಷಿಸಿದ ಬಳಿಕ ಎಂಎನ್ಎಸ್ ಪಕ್ಷದ ವರ್ಸೋವಾ ಘಟಕದ ಅಧ್ಯಕ್ಷ ಸಂದೇಶ್ ದೇಸಾಯಿ ನೇತೃತ್ವದ ಕಾರ್ಯಕರ್ತರ ಗುಂಪು ಡಿ-ಮಾರ್ಟ್ ನುಗ್ಗಿ ಸಿಬ್ಬಂದಿಗೆ ಕಪಾಳಮೋಕ್ಷ ಮಾಡಿದೆ ಎಂದು ಆರೋಪಿಸಲಾಗಿದೆ.
ಡಿ-ಮಾರ್ಟ್ ಸಿಬ್ಬಂದಿಗೆ ಎಂಎನ್ಎಸ್ ಕಾರ್ಯಕರ್ತರು ಕಪಾಳಮೋಕ್ಷ ಮಾಡಿದ್ದಾರೆ. ಬಳಿಕ ಡಿ-ಮಾರ್ಟ್ ಸಿಬ್ಬಂದಿ ಕ್ಷಮೆ ಕೋರುತ್ತಿರುವ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದೆ.