ಬದಿಯಡ್ಕ: ಮಾನ್ಯ ಸಮೀಪದ ಕಾರ್ಮಾರು ಶ್ರೀಮಹಾವಿಷ್ಣು ಕ್ಷೇತ್ರದ ಪುನಃಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವ ಶನಿವಾರ ಆರಂಭಗೊಂಡಿದ್ದು, 9 ರ ವರೆಗೆ ವಿವಿಧ ವೈದಿಕ, ಧಾರ್ಮಿಕ, ಸಾಂಸ್ಕøತಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ.
ಶನಿವಾರ ಬೆಳಿಗ್ಗೆ ಗಣಪತಿಹೋಮ, ಉರ್ಷಪೂಜೆ, ಬೆಳಿಗ್ಗೆ 8 ಕ್ಕೆ ಉಗ್ರಾಣಮುಹೂರ್ತ, ಗಣಪತಿ ಪೂಜೆ ನಡೆಯಿತು. ಬಳಿಕ 9 ರಿಂದ ಕಡೆಂಜಿ ಶ್ರೀಮಹಾವಿಷ್ಣು ಕ್ಷೇತ್ರದಿಂದ ಬದಿಯಡ್ಕ, ನೀರ್ಚಾಲು ದಾರಿಯಾಗಿ ಶ್ರೀಕ್ಷೇತ್ರಕ್ಕೆ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆ ಮಧ್ಯಾಹ್ನ ಆಗಮಿಸಿತು. ಈ ವೇಳೆ ಬದಿಯಡ್ಕ, ನೀರ್ಚಾಲು, ಪುದುಕೋಳಿ, ಮಾನ್ಯಗಳಲ್ಲಿ ವಿವಿಧ ಸಂಘಸಂಸ್ಥೆಗಳು ಬರಮಾಡಿಕೊಂಡರು. ಮಧ್ಯಾಹ್ನ 12.30ಕ್ಕೆ ಮಹಾಪೂಜೆ, ಅನ್ನಸಂತರ್ಪಣೆ ನಡೆಯಿತು.
ಸಂಜೆ 4 ಕ್ಕೆ ತಂತ್ರಿವರ್ಯ ದೇಲಂಪಾಡಿ ಗಣೇಶ ತಂತ್ರಿಗಳಿಗೆ ಪೂರ್ಣಕುಂಭ ಸ್ವಾಗತ ನೀಡಿ ಬಳಿಕ ದೇವತಾ ಪ್ರಾರ್ಥನೆ, ಆಚಾರ್ಯವರಣ, ಪುಣ್ಯಾಹವಾಚನ, ಪ್ರಾಸಾದ ಶುದ್ಧಿ, ಅಂಕುರಾರೋಪಣ, ರಾಕ್ಷೋಘ್ನಹೋಮ, ವಾಸ್ತುಹೋಮ, ವಾಸ್ತುಬಲಿ ನಡೆಯಿತು. 7 ಕ್ಕೆ ಸಾಂಸ್ಕøತಿಕ ಕಾರ್ಯಕ್ರಮಗಳ ಉದ್ಘಾಟನೆಯಿತು. ಮಧುಸೂದನ ಅಯರ್ ಅಧ್ಯಕ್ಷತೆ ವಹಿಸಿದ್ದರು. ಶ್ರೀಮದ್ ಎಡನೀರು ಮಠಾಧೀಶ ಶ್ರೀಸಚ್ಚಿದಾನಂದ ಭಾರತೀ ಶ್ರೀಗಳು ಉದ್ಘಾಟಿಸಿ ಆಶೀರ್ವಚನ ನೀಡಿದರು. ಚಿತ್ರಾಪುರ ಮಠದ ಶ್ರೀವಿದ್ಯೇಂದ್ರ ತೀರ್ಥ ಪಾದಂಗಳು ದಿವ್ಯ ಉಪಸ್ಥಿತರಿದ್ದು ಆಶೀರ್ವಚನ ನೀಡಿದರು. ವಿವಿಧ ವಲಯಗಳ ಗಣ್ಯರು ಉಪಸ್ಥಿತರಿದ್ದರು. ರಾತ್ರಿ 9 ರಿಂದ ಸ್ಥಳೀಯ ಪ್ರತಿಭೆಗಳಿಂದ ನೃತ್ಯ ವೈವಿಧ್ಯ ನಡೆಯಿತು.
ಇಂದಿನ ಕಾರ್ಯಕ್ರಮ:
ಬೆಳಿಗ್ಗೆ 5.30ರಿಂದ ಗಣಪತಿಹೋಮ ಸಹಿತ ವಿವಿಧ ವಿಧಿವಿಧಾನಗಳು, 10 ಕ್ಕೆ ವಜ್ರದೇಹಿ ಮಠದ ಶ್ರೀರಾಜಶೇಖರಾನಂದ ಸ್ವಾಮಿಜೀಗಳ ಆಗಮನ, ಪೂರ್ಣಕುಂಭ ಸ್ವಾಗತ ನಡೆಯಲಿದ್ದು, ಬಳಿಕ ಕುಂಟಾರು ರವೀಶ ತಂತ್ರಿಗಳ ಅಧ್ಯಕ್ಷತೆಯಲ್ಲಿ ನಡೆಯುವ ಧಾರ್ಮಿಕ ಸಭೆಯಲ್ಲಿ ಆಶೀರ್ವಚನ ನೀಡುವರು. ಡಿ.ಎನ್.ಮಾನ್ಯ ಕಾರ್ಕಳ ಧಾರ್ಮಿಕ ಭಾಷಣ ಮಾಡುವರು. ತಂತ್ರಿ ಬ್ರಹ್ಮಶ್ರೀ ಗಣಾಧಿರಾಜ ಉಪಾಧ್ಯಾಯ ಕೊಲ್ಲಂಗಾನ ಗೌರವ ಉಪಸ್ಥಿತರಿರುವರು. ವಿವಿಧ ವಲಯಗಳ ಪ್ರಮುಖರು ಭಾಗವಜಹಿಸುವರು. ಮಧ್ಯಾಹ್ನ 1.30ರಿಂದ ಅತಿಥಿ ಕಲಾವಿದರ ಕೂಡುವಿಕೆಯಲ್ಲಿ ಕರ್ಣಾರ್ಜುನ ಕಾಳಗ ಯಕ್ಷಗಾನ ತಾಳಮದಳೆ ನಡೆಯಲಿದೆ. 4.30ರಿಂದ ಬದಿಯಡ್ಕದ ಮರಾಠಿ ಶಾರದೋತ್ಸವ ಸಮಿತಿಯವರಿಂದ ಕೈಕೊಟ್ಟಿಕಳಿ, 5.45 ರಿಂದ ವಿವಿಧ ವೈದಿಕ ವಿಧಿಗಳು, 6 ರಿಂದ ಪಾವಂಜೆ ಮೇಳದವರಿಂದ ಯಕ್ಷಗಾನ ಬಯಲಾಟ ಶ್ರೀಹರಿ ದರ್ಶನ ಪ್ರದರ್ಶನಗೊಳ್ಳಲಿದೆ.