HEALTH TIPS

Wayanad landslide: ಮಾದರಿ ಟೌನ್‌ಶಿಪ್‌ಗೆ ಸಿಎಂ ಪಿಣರಾಯಿ ವಿಜಯನ್ ಶಂಕುಸ್ಥಾಪನೆ

ವಯನಾಡ್: ವಯನಾಡ್‌ನಲ್ಲಿ ಸಂಭವಿಸಿದ್ದ ಭೂಕುಸಿತದ ಸಂತ್ರಸ್ತರಿಗೆ ಪುನರ್ವಸತಿ ಕಲ್ಪಿಸಲು ಮಾದರಿ ಟೌನ್‌ಶಿಪ್‌ ನಿರ್ಮಾಣಕ್ಕೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಗುರುವಾರ ಶಂಕುಸ್ಥಾಪನೆ ನೆರವೇರಿಸಿದರು.

ಇಲ್ಲಿನ ಕಲ್ಪೆಟ್ಟದ ಎಲ್‌ಸ್ಟೋನ್‌ ಎಸ್ಟೇಟ್‌ನಲ್ಲಿ ಸರ್ಕಾರ ಸ್ವಾಧೀನಪಡಿಸಿಕೊಂಡ ಭೂಮಿಯಲ್ಲಿ ಮಾದರಿ ಟೌನ್‌ಶಿಪ್ ನಿರ್ಮಿಸಲಾಗುತ್ತಿದೆ.

ಕಲ್ಪೆಟ್ಟ ಬೈಪಾಸ್ ಬಳಿ ಸರ್ಕಾರ ಸ್ವಾಧೀನಪಡಿಸಿಕೊಂಡಿರುವ 64 ಹೆಕ್ಟೇರ್‌ ಪ್ರದೇಶದಲ್ಲಿ 'ಟೌನ್‌ಶಿಪ್' ನಿರ್ಮಾಣವಾಗಲಿದ್ದು, ತಲಾ 7 ಸೆಂಟ್ಸ್ ಜಾಗದಲ್ಲಿ 100 ಚದರ ಅಡಿ ವಿಸ್ತೀರ್ಣದ ಒಂದೇ ಅಂತಸ್ತಿನ ಮನೆಗಳನ್ನು ನಿರ್ಮಿಸಲಾಗುತ್ತದೆ.

ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ವಯನಾಡ್‌ ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಉಪಸ್ಥಿತರಿದ್ದರು.

2024ರ ಜುಲೈ 30 ರಂದು ವಯನಾಡ್‌ನಲ್ಲಿ ಸಂಭವಿಸಿದ್ದ ಭೀಕರ ಭೂಕುಸಿತದಿಂದ ಮುಂಡಕ್ಕೈ ಮತ್ತು ಚೂರಲ್‌ಮಲ ಪ್ರದೇಶಗಳು ಸಂಪೂರ್ಣವಾಗಿ ನಾಶವಾಗಿದ್ದವು. ಘಟನೆಯಲ್ಲಿ ಸುಮಾರು 200ಕ್ಕೂ ಹೆಚ್ಚು ಜನ ಮೃತಪಟ್ಟಿದ್ದರು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

src="https://blogger.googleusercontent.com/img/b/R29vZ2xl/AVvXsEik3hLMvgO1WDICUKu_VF5lQRG3CMZau_AmC5MorS73B9lRYpLdDKJGTnB8c-U47BHqrAJ7dkiQUqiUWGQ6qg9A5jtCXrPkzIP4GPJfI00HmwhHX-3VG35FjkD_MxxI10r2v4FqSQ8LuyjG/w640-h360/samarasa+new+add.JPG" width="500px" / />



Qries