HEALTH TIPS

ಭಾರತದಿಂದ ಬ್ರಹ್ಮಾಸ್ತ್ರ- ಸಿಂಧೂ ನದಿ ನೀರು ಬಂದ್, . ಪಾಕಿಸ್ತಾನಿಗಳು ತಕ್ಷಣ ಭಾರತ ಬಿಟ್ಟು ಹೋಗಬೇಕು, ಇನ್ನು ಮುಂದೆ ವೀಸಾ ಇಲ್ಲ- ಅಟ್ಟಾರಿ ಗಡಿ ಮುಚ್ಚುಗಡೆ; ಸನ್ನದ್ಧರಾಗಿರಲು ಪಡೆಗಳಿಗೆ ಸೂಚನೆ

ನವದೆಹಲಿ: ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ಭಾರತವು ಕ್ರಮಗಳನ್ನು ಬಿಗಿಗೊಳಿಸಿದೆ. ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ಕೆಲವು ಹೊತ್ತಿನ ಹಿಂದೆ  ನಡೆದ ಸಚಿವ ಸಂಪುಟ ಸಭೆಯಲ್ಲಿ ಭಾರತ ನಿರ್ಣಾಯಕ ನಿರ್ಧಾರಗಳನ್ನು ತೆಗೆದುಕೊಂಡಿದೆ. 

ಸಿಂಧೂ ನದಿ ಜಲ ಒಪ್ಪಂದವನ್ನು ಸ್ಥಗಿತಗೊಳಿಸುವುದು ಅತ್ಯಂತ ನಿರ್ಣಾಯಕ ನಿರ್ಧಾರವಾಗಿದೆ.  ಪಾಕಿಸ್ತಾನ ಹೈಕಮಿಷನ್‌ನಲ್ಲಿರುವ ರಕ್ಷಣಾ ಅಧಿಕಾರಿಗಳನ್ನು ಹೊರಹಾಕಲಾಗುವುದು. ಪಾಕಿಸ್ತಾನಿ ನಾಗರಿಕರು ಕೂಡ ಭಾರತವನ್ನು ತಕ್ಷಣವೇ ತೊರೆಯುವಂತೆ ಸೂಚಿಸಲಾಗಿದೆ. ವಾಘಾ-ಅಟ್ಟಾರಿ ಗಡಿಯನ್ನು ಮುಚ್ಚಲಾಗುವುದು.ಇದೆಲ್ಲ ತಕ್ಷಣದಿಂದ ಜಾರಿಗೆ ಬರಲಿದೆ. ನಡೆದಿರುವ ಭಯೋತ್ಪಾದಕ ದಾಳಿಗೆ ಪಾಕಿಸ್ತಾನದಿಂದ ಬೆಂಬಲ ದೊರೆತಿದೆ ಎಂದು ಕೇಂದ್ರ ದೃಢಪಡಿಸಿದೆ.
ಸೈನ್ಯಕ್ಕೂ ಸಿದ್ಧರಾಗಿರಲು ಸೂಚನೆ ನೀಡಲಾಗಿದೆ. ಪಾಕಿಸ್ತಾನ ಹೈಕಮಿಷನ್‌ನಲ್ಲಿರುವ ಅಧಿಕಾರಿಗಳ ಸಂಖ್ಯೆಯನ್ನು 30 ಕ್ಕೆ ಇಳಿಸಲಾಗಿದೆ. ಭಯೋತ್ಪಾದನೆಯನ್ನು ಬೆಂಬಲಿಸುತ್ತಿರುವ ಪಾಕಿಸ್ತಾನವನ್ನು ಭಾರತ ಕ್ಷಮಿಸುವುದಿಲ್ಲ ಎಂದು ಗಟ್ಟಿಯಾಗಿ ಘೋಷಿಸಲಾಗಿದೆ.
ದೇಶವು ಭಯೋತ್ಪಾದಕರಿಗೆ ತಲೆಬಾಗುವುದಿಲ್ಲ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. ಭಯೋತ್ಪಾದಕ ದಾಳಿಯ ಹಿಂದಿರುವ ಯಾರನ್ನೂ ಬಿಡುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದರು. ಭಾರತೀಯ ರಾಜತಾಂತ್ರಿಕರನ್ನು ವಾಪಸ್ ಕರೆಸಲಾಗುವುದು. 

ಕೇಂದ್ರ ವಿದೇಶಾಂಗ ಕಾರ್ಯದರ್ಶಿ ಮಿಸ್ರಿ ಈಗಷ್ಟೇ ಸುದ್ದಿಗೋಷ್ಠಿ ನಡೆಸಿ ವಿವರ ನೀಡಿದರು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

src="https://blogger.googleusercontent.com/img/b/R29vZ2xl/AVvXsEik3hLMvgO1WDICUKu_VF5lQRG3CMZau_AmC5MorS73B9lRYpLdDKJGTnB8c-U47BHqrAJ7dkiQUqiUWGQ6qg9A5jtCXrPkzIP4GPJfI00HmwhHX-3VG35FjkD_MxxI10r2v4FqSQ8LuyjG/w640-h360/samarasa+new+add.JPG" width="500px" / />



Qries