HEALTH TIPS

ಆಯುಷ್ಮಾನ್ ಭಾರತ್ ವಂಚನೆ ಪ್ರಕರಣ: ಜಾರ್ಖಂಡ್‌, ದೆಹಲಿಯಲ್ಲಿ ಇ.ಡಿ ದಾಳಿ

ರಾಂಚಿ: ಕೇಂದ್ರ ಸರ್ಕಾರದ ಆಯುಷ್ಮಾನ್‌ ಭಾರತ್‌ ಯೋಜನೆಯಲ್ಲಿ ನಡೆದಿದೆ ಎನ್ನಲಾದ ಹಣ ಅಕ್ರಮ ವರ್ಗಾವಣೆ ಪ್ರಕರಣದ ತನಿಖೆಯ ಭಾಗವಾಗಿ ಜಾರ್ಖಂಡ್, ದೆಹಲಿ ಮತ್ತು ಪಶ್ಚಿಮ ಬಂಗಾಳದ 21 ಸ್ಥಳಗಳ ಮೇಲೆ ಇಂದು (ಶುಕ್ರವಾರ) ಜಾರಿ ನಿರ್ದೇಶನಾಲಯ ದಾಳಿ ನಡೆಸಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

ಜಾರ್ಖಂಡ್‌ನ ಮಾಜಿ ಆರೋಗ್ಯ ಸಚಿವ ಬನ್ನಾ ಗುಪ್ತಾ ಅವರ ಖಾಸಗಿ ಕಾರ್ಯದರ್ಶಿ ಕಚೇರಿ, ಜಾರ್ಖಂಡ್ ರಾಜ್ಯ ಆರೋಗ್ಯ ಸೊಸೈಟಿ (ಜೆಎಸ್‌ಎಎಸ್) ಅಧಿಕಾರಿಗಳಿಗೆ ಸಂಬಂಧಿಸಿದ ಸ್ಥಳಗಳ ಮೇಲೆ ಇಂದು ಮುಂಜಾನೆ ದಾಳಿ ನಡೆಸಲಾಗಿದೆ.

ರಾಂಚಿಯ ಅಶೋಕ್‌ ನಗರ, ಬರಿಯಾಟು ಮತ್ತು ಜೆಮ್‌ಶೆಡ್‌ಪುರದಲ್ಲಿನ ಕೆಲವು ಮನೆಗಳು ಮತ್ತು ನರ್ಸಿಂಗ್‌ ಹೋಂಗಳ ಮೇಲೆಯೂ ಇ.ಡಿ ದಾಳಿ ನಡೆಸಿದೆ ಎಂದು ಮೂಲಗಳು ಹೇಳಿವೆ.

ಕೋಲ್ಕತ್ತದಲ್ಲಿ ಕೆಲವು ಎಂಟ್ರಿ ಆಪರೇಟರ್‌ಗಳು ಮತ್ತು ಹವಾಲಾ ಡೀಲರ್‌ಗಳ ಕಚೇರಿಗಳಲ್ಲಿಯೂ ಶೋಧ ನಡೆಸಲಾಗಿದೆ.

'ಆಯುಷ್ಮಾನ್ ಭಾರತ್' ಕೇಂದ್ರ ಸರ್ಕಾರದ ಒಂದು ಪ್ರಮುಖ ಯೋಜನೆಯಾಗಿದ್ದು, ಇದು ನಾಗರಿಕರಿಗೆ ಸಾರ್ವತ್ರಿಕ ಆರೋಗ್ಯ ರಕ್ಷಣೆಯನ್ನು ಒದಗಿಸುವ ಗುರಿಯನ್ನು ಹೊಂದಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

src="https://blogger.googleusercontent.com/img/b/R29vZ2xl/AVvXsEik3hLMvgO1WDICUKu_VF5lQRG3CMZau_AmC5MorS73B9lRYpLdDKJGTnB8c-U47BHqrAJ7dkiQUqiUWGQ6qg9A5jtCXrPkzIP4GPJfI00HmwhHX-3VG35FjkD_MxxI10r2v4FqSQ8LuyjG/w640-h360/samarasa+new+add.JPG" width="500px" / />



Qries